Webdunia - Bharat's app for daily news and videos

Install App

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Krishnaveni K
ಗುರುವಾರ, 14 ಆಗಸ್ಟ್ 2025 (13:29 IST)
ಬೆಂಗಳೂರು: ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ವಿಷಯದಲ್ಲಿ ವಿಳಂಬ ನೀತಿ ಅನುಸರಿಸಿ ದಲಿತ ಸಮುದಾಯಗಳನ್ನು ವಂಚಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.

ವಿಧಾನಸೌಧದ ಮೊಗಸಾಲೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೀದಿ ಬೀದಿಗಳಲ್ಲಿ ಹೋರಾಟ ನಡೆಯುತ್ತಿದೆ. ಬಿಜೆಪಿ ಸರಕಾರವು ಈಗಾಗಲೇ 4 ಭಾಗಗಳಾಗಿ (ಎ, ಬಿ, ಸಿ, ಡಿ) ವಿಂಗಡಿಸಿ ಎ ಗುಂಪಿಗೆ ಶೇ 6, ಬಿ- ಶೇ5.5, ಸಿ- 4.5 ಮತ್ತು ಡಿ ಗುಂಪಿಗೆ ಶೇ 1 ರಷ್ಟು ಮೀಸಲಾತಿ ಕೊಟ್ಟಿತ್ತು ಎಂದು ವಿವರಿಸಿದರು.

ಇದನ್ನು ಕಾಂಗ್ರೆಸ್ ಸರಕಾರ ಒಪ್ಪದೇ ಕೋರ್ಟಿನ ಆದೇಶ ಬಂದು ಒಂದು ವರ್ಷವಾದರೂ ಇದುವರೆಗೂ ಮೀನಾಮೇಷ ಎಣಿಸುತ್ತಿದೆ. ಇದರಿಂದ ಬೀದಿರಂಪ ಆಗುವ ಸಂದರ್ಭ ಹೆಚ್ಚಾಗಿದೆ. ಸೌಮ್ಯವಾಗಿ ಇರುತ್ತಿದ್ದ ಪರಿಶಿಷ್ಟ ಜಾತಿಗಳು ಆಕ್ರೋಶದಿಂದ ಬೀದಿಗೆ ಬಂದು ಹೋರಾಟ ಮಾಡುವ ಪರಿಸ್ಥಿತಿಯನ್ನು ಕಾಂಗ್ರೆಸ್ ಸರಕಾರ ಇವತ್ತು ಹುಟ್ಟು ಹಾಕಿದೆ ಎಂದು ಆಕ್ಷೇಪಿಸಿದರು.

ನಾಗಮೋಹನ್‍ದಾಸ್ ಆಯೋಗ ರಚಿಸಿ 5 ಗುಂಪು ಮಾಡಿದ್ದಾರೆ. ಕೆಲವು ಗುಂಪಿಗೆ ಹೆಚ್ಚಿನ ಆದ್ಯತೆ ಕೊಡುವ ರೀತಿ ಛಲವಾದಿ ಸಮುದಾಯದ ಕೆಲವು ಜಾತಿಗಳನ್ನು ಮಾದಿಗ ಸಮುದಾಯಕ್ಕೆ ಸೇರಿಸಿದ್ದಾರೆ. ಇನ್ನೂ ಕೆಲವು ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ- ಈ ಜಾತಿಗಳು ಜಾತಿಗಳಲ್ಲ; ಅದರ ಮೂಲ ಜಾತಿ ಛಲವಾದಿ ಸಮುದಾಯದ್ದು. ಈ ಜಾತಿ ಗಣತಿಯೇ ಸರಿ ಇಲ್ಲ ಎಂದು ಟೀಕಿಸಿದರು. ಶೇ 60-65 ಗಣತಿ ಆಗಿದೆ; ಮುಂದುವರೆದು ಮಾಡಲಾಗಿಲ್ಲ ಎಂದು ಎಲ್ಲ ಪತ್ರಿಕೆ, ಮಾಧ್ಯಮಗಳಲ್ಲಿ ಬಂದಿದೆ ಎಂದರು.
ಈ ರೀತಿ ಗಣತಿಯಿಂದ ಸರಿಯಾದ ದತ್ತಾಂಶ ಸಿಗುವುದಿಲ್ಲ; ಹಿಂದೆ ಮಾಧುಸ್ವಾಮಿ ಸಂಪುಟ ಉಪ ಸಮಿತಿ ಜಾರಿ ಮಾಡಿದ್ದನ್ನೇ ಮುಂದುವರೆಸಬಹುದಿತ್ತು. ತಪ್ಪು ಮಾಹಿತಿ ಕೊಟ್ಟು ಬಲಗೈ ಸಮುದಾಯಕ್ಕೆ ಸಂಪೂರ್ಣ ಅನ್ಯಾಯ ಮಾಡಲಾಗಿದೆ. ಎಡಗೈ ಸಮುದಾಯಕ್ಕೆ- ಸ್ಪøಶ್ಯ ಸಮುದಾಯಕ್ಕೆ ಎಷ್ಟು ಬೇಕಾದರೂ ಕೊಡಿ. ಆದರೆ, 5 ಗುಂಪು ಮಾಡಿದ್ದು ದೊಡ್ಡ ತಪ್ಪು ಎಂದು ಟೀಕಿಸಿದರು. ಪರಿಶಿಷ್ಟ ಜಾತಿಗಳ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಜಾತಿ, ಪರೆಯನ್, ಪರೆಯ ಮತ್ತು ಮುಂಡಾಳ, ಮೊಗೇರ- ಇವೆಲ್ಲವೂ ಬಲಗೈ ಸಮುದಾಯದಲ್ಲಿ ಬರಬೇಕಿತ್ತು ಎಂದು ವಿಶ್ಲೇಷಿಸಿದರು.

ಅವುಗಳನ್ನು ತಪ್ಪಿಸಿ ಬೇರೆ ಕಡೆ ಹಾಕಿ ಅವರಿಗೆ ಬರಬೇಕಾದ ಅಂಶಗಳನ್ನು ಮೋಸ ಮಾಡಲಾಗಿದೆ. ಇದು ಅವೈಜ್ಞಾನಿಕ ವರದಿ ಎಂದು ಆಕ್ಷೇಪಿಸಿದರು. ಒಂದು ವರ್ಷದಿಂದ ನೇಮಕಾತಿ, ಬಡ್ತಿ ಆಗುತ್ತಿಲ್ಲ. ಅನೇಕ ಯುವಕರು ಬೀದಿ ಬೀದಿ ಸುತ್ತುವಂತಾಗಿದೆ. ಬೇಗನೆ ಒಳಮೀಸಲಾತಿ ಕೊಡಬೇಕು ಮತ್ತು ಛಲವಾದಿ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿದರು. ಇದರಲ್ಲಿ ಮೋಸ, ವಂಚನೆ ಆದರೆ ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಬೀದಿನಾಯಿಗಳ ಪಾಡು ಇಂದು ತೀರ್ಮಾನಿಸಲಿರುವ ಸುಪ್ರೀಂಕೋರ್ಟ್

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ಮುಂದಿನ ಸುದ್ದಿ
Show comments