Webdunia - Bharat's app for daily news and videos

Install App

ಬೆಳಿಗ್ಗೆಯಿಂದ ಸಂಜೆವರೆಗೆ ದರ್ಶನ್ ಮುಖ ನೋಡಲು ಅಸಹ್ಯವಾಗುತ್ತೆ: ಕೆಎನ್ ರಾಜಣ್ಣ ಗರಂ

Sampriya
ಗುರುವಾರ, 29 ಆಗಸ್ಟ್ 2024 (16:30 IST)
Photo Courtesy X
ಹಾಸನ: ಬೆಳಿಗ್ಗೆಯಿಂದ ಟಿವಿಯಲ್ಲಿ ನಟ ದರ್ಶನ್ ಒಬ್ಬನನ್ನೇ ತೋರಿಸ್ತಾ ಇದ್ದೀರಿ. ದೇಶದಲ್ಲಿ ಬೇರೇನೂ ಇಲ್ವಾ. ಆತ ಸಮಾಜಕ್ಕೆ ಏನ್ ಒಳ್ಳೆಯ ಕೆಲಸ ಮಾಡಿದ್ದಾನೆಂದು ಆ ರೀತಿ ತೋರಿಸ್ತಾ ಇದ್ದೀರಿ. ಆತ ಒಳ್ಳೆಯ ನಟ ಎಂದು ಒಪ್ಪಿಕೊಳ್ಳುವ, ಆದರೆ ಆ ಕಲಾವಿದ ಮಾಡಬಾರದನ್ನು ಮಾಡಿದರೆ ಕಾನೂನು ಕ್ರಮ ತಗೊಳುತ್ತೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ ಅವರು ಗರಂ ಆಗಿದ್ದಾರೆ.

ವಿಐಪಿ ಟ್ರೀಟ್‌ಮೆಂಟ್ ಹಿನ್ನೆಲೆ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಅವರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ದರ್ಶನ್ ಒಬ್ಬರದ್ದೇ ನ್ಯೂಸ್ ಇರೋದಾ, ಬೆಳಿಗ್ಗೆ ಎಂದಾಕ್ಷಣದಿಂದ ಟಿವಿಯಲ್ಲಿ ದರ್ಶನ್ ಮುಖ ಮಾತ್ರ ಬರ್ತಿದೆ, ಅದನ್ನೇ ನೋಡಲು ಅಸಹ್ಯವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ವಿಐಪಿ ಟ್ರೀಟ್‌ಮೆಂಟ್ ನೀಡುತ್ತಿರುವ ಪೋಟೋ, ಹಾಗೂ ಕೈದಿಯೊಬ್ಬನ ಬಳಿ ವಿಡಿಯೋ ಕಾಲ್‌ನಲ್ಲಿ ಮಾತನಾಡಿದ ವಿಡಿಯೋ ವೈರಲ್ ಆಗಿದ್ದು. ಅದಲ್ಲದೆ ಸುದ್ದಿ ವಾಹಿನಿಗಳಲ್ಲಿ ಈ ವಿಚಾರ ಬಾರೀ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಎಚ್ಚೆತ್ತಾ ರಾಜ್ಯ ಸರ್ಕಾರ ಸೂಕ್ತ ಕ್ರಮಕ್ಕೆ ಸೂಚಿಸಿತ್ತು. ಅದರಂತೆ ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಶಿಫ್ಟ್ ಮಾಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments