Select Your Language

Notifications

webdunia
webdunia
webdunia
webdunia

ಚಾಮರಾಜನಗರ: ಲಾರಿ ತಡೆಗಟ್ಟಿ ಕಬ್ಬು ಸವಿದ ಮರಿ ಆನೆ!

ಚಾಮರಾಜನಗರ: ಲಾರಿ ತಡೆಗಟ್ಟಿ ಕಬ್ಬು ಸವಿದ ಮರಿ ಆನೆ!
Chamarajanagara , ಶುಕ್ರವಾರ, 17 ಜೂನ್ 2022 (14:38 IST)
ಚಲಿಸುತ್ತಿದ್ದ  ಲಾರಿಯನ್ನು ತಡೆಗಟ್ಟಿ ಆನೆಯೊಂದು  ಕಬ್ಬು ಮೆದ್ದಿರುವ ಘಟನೆ ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ  ನಡೆದಿದೆ.
ಕಳೆದ ಕೆಲವು ತಿಂಗಳುಗಳಿಂದ ಅಸನೂರು, ಕಾರೆಪಾಳ, ಪುಣಜನೂರು ಸುತ್ತಮುತ್ತ ಆನೆ ಕಬ್ಬು ವಸೂಲಿ ನಿಂತಿತ್ತು. ಈಗ ಮತ್ತೇ ಆರಂಭಗೊಂಡಿದ್ದು ಆನೆಯೊಂದು ರಾಷ್ಟ್ರೀಯ ಹೆದ್ದಾರಿ ಸಮೀಪವೇ ಬೀಡುಬಿಡುತ್ತಿದ್ದು ಗುರುವಾರ ಕಬ್ಬು ತುಂಬಿದ ಲಾರಿ ಅಡ್ಡಗಟ್ಟಿ ಕಬ್ಬು ತಿಂದಿದೆ, ಇದನ್ನು ಎದುರಿನ ಬಸ್ ಚಾಲಕರೊಬ್ಬರು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.
ಈ ಆನೆಯ ದಾದಾಗಿರಿಗೆ ಓಂಕಾರ ಹಾಕಿದವರು ಲಾರಿ ಚಾಲಕರೇ ಎಂದು ತಿಳಿದುಬಂದಿದ್ದು ಆನೆ ಕಂಡ ಕೂಡಲೇ ಲಾರಿ ನಿಲ್ಲಿಸಿ ಕಬ್ಬು ತಿನ್ನಲು ಅನವು ಮಾಡಿಕೊಟ್ಟು ಅಭ್ಯಾಸ ಮಾಡಿಸಿದ್ದರಿಂದ ಈಗ ಯಾವುದೇ ಅಳುಕಿಲ್ಲದೇ ಲಾರಿ ಅಡ್ಡಗಟ್ಟಿ ವಸೂಲಿ ಮಾಡಲು ಪ್ರಾರಂಭಿಸಿರುವುದು ಸಂಚರಿಸುವವರಿಗೆ ಮುದವನ್ನೂ ನೀಡುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

2,690 ಕೋಟಿ ರೂ. ಮೌಲ್ಯದ 81 ಹೊಸ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ