Webdunia - Bharat's app for daily news and videos

Install App

ಧಾರಾಕಾರ ಮಳೆಗೆ ಚಾಮರಾಜನಗರ ತತ್ತರ

Webdunia
ಶುಕ್ರವಾರ, 14 ಅಕ್ಟೋಬರ್ 2022 (18:57 IST)
ಚಾಮರಾಜನಗರದಲ್ಲಿ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ ಜೋಡಿ ರಸ್ತೆ, ಜಿಲ್ಲಾಡಳಿತ ಭವನ ಸೇರಿದಂತೆ‌ ಕೆಲ ಬಡಾವಣೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿಂತಿದ್ದ ಮಳೆರಾಯನ ಆರ್ಭಟ ಮತ್ತೆ ಶುರುವಾಗಿದೆ. ರಾತ್ರಿಯಿಂದ ಬೆಳಗ್ಗೆವರೆಗೂ ನಿರಂತರ ಮಳೆ ಸುರಿದಿದ್ದು, ನಗರದ ಜನತೆ ಪರದಾಡುವಂತಾಗಿದೆ. ಜೋರು ಮಳೆ ಬಂತು ಎಂದರೆ ಸಾಕು ಜೋಡಿ ರಸ್ತೆ ಹಾಗೂ ಜಿಲ್ಲಾಡಳಿತ ಭವನದ ಮುಂದೆ ರಸ್ತೆಗಳು ನೀರು ಹೋಗದೇ ನದಿಗಳಂತಾಗುತ್ತದೆ. ಚಾಮರಾಜನಗರ ರಸ್ತೆ ಆಗಲೀಕರಣದ ವೇಳೆ ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿರೋ ಆರೋಪ ಕೇಳಿ ಬಂದಿದ್ದು, ಅರ್ಧಕ್ಕೆ ನಿಂತ್ತಿರುವ ರಸ್ತೆ ಕಾಮಗಾರಿಯಿಂದ ಕಳೆದ ಮೂರು ನಾಲ್ಕು ವರ್ಷಗಳಿಂದಲ್ಲೂ ನೀರು ನಗರದ ಮುಖ್ಯ ರಸ್ತೆಗೆ‌ ನುಗ್ಗುವುದರ ಜೊತೆ ಅಂಗಡಿ ಮುಂಗಟ್ಟು ಹಾಗೂ ಕೆಲ ಬಡಾವಣೆಗಳಿಗೂ ವ್ಯಾಪಿಸುತ್ತಿದೆ. ಇನ್ನು15ನೇ ವಾರ್ಡ್​​ನ ಸೋಮಣ್ಣ ಲೇಔಟ್ ಮನೆಗಳಿಗೆ ನೀರು ನುಗ್ಗಿದ್ದು  ಮಹಿಳೆಯರು, ವೃದ್ಧರನ್ನು ಆಗ್ನಿಶಾಮಕ ದಳದ ಸಿಬ್ಬಂದಿ ಬೇರೆಡೆಗೆ ಸ್ಥಳಾಂತರ ಮಾಡಿದ್ದಾರೆ. ಬೀದಿಬದಿ ವ್ಯಾಪಾರ ಹಾಗೂ ಸಂಚಾರ ಸಂಪೂರ್ಣ ಅಯೋಮಯವಾಗಿದೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments