Webdunia - Bharat's app for daily news and videos

Install App

ಚಾಮರಾಜಪೇಟೆ ದನದ ಕೆಚ್ಚಲು ಕುಯ್ದ ಶೇಖ್ ನಸ್ರುಗೆ ಮಾನಸಿಕ ಅಸ್ವಸ್ಥ್ಯ ಎಂದು ರಕ್ಷಿಸಲು ನೋಡ್ತಿದ್ದಾರಾ

Krishnaveni K
ಸೋಮವಾರ, 13 ಜನವರಿ 2025 (14:36 IST)
Photo Credit: X
ಬೆಂಗಳೂರು: ಚಾಮರಾಜಪೇಟೆಯಲ್ಲಿ ದನದ ಕೆಚ್ಚಲು ಕುಯ್ದ ಆರೋಪದಲ್ಲಿ ಬಂಧಿತನಾಗಿರುವ ಶೇಖ್ ನಸ್ರುಗೆ ಮಾನಸಿಕ ಅಸ್ವಸ್ಥ ಎಂದು ಹಣೆಪಟ್ಟಿ ನೀಡಿ ರಕ್ಷಿಸಲು ನೋಡ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಹಸುವಿನ ಮಾಲಿಕ ಕರ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಚಾಮರಾಜಪೇಟೆಯಲ್ಲಿ ಶನಿವಾರ ತಡರಾತ್ರಿ ಕರ್ಣ ಎಂಬವರಿಗೆ ಸೇರಿದ ಮೂರು ಹಸುಗಳ ಕೆಚ್ಚಲು ಕುಯ್ದು ಕಾಲಿಗೆ ಮಚ್ಚಿನ ಹಲ್ಲೆ ಮಾಡಿ ಗಾಯಗೊಳಿಸಿ ವಿಕೃತಿ ಮೆರೆಯಲಾಗಿತ್ತು. ಈ ಘಟನೆ ದೇಶದಾದ್ಯಂತ ಗಮನ ಸೆಳೆದಿದೆ.

ಘಟನೆ ಸಂಬಂಧ ಮಾಲಿಕ ಕರ್ಣ ನೀಡಿದ ದೂರಿನನ್ವಯ ಶೇಖ್ ನಸ್ರು ಅಲಿಯಾಸ್ ನಸ್ರುದ್ದೀನ್ ಎಂಬಾತನನ್ನು ಬಂಧಿಸಲಾಗಿತ್ತು. ಕುಡಿದ ಮತ್ತಿನಲ್ಲಿ ಕೃತ್ಯವೆಸಗಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದ. ಆದರೆ ಬಂಧಿತನನ್ನು ಈಗ ಮಾನಸಿಕ ಅಸ್ವಸ್ಥ ಎಂಬಂತೆ ಬಿಂಬಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಮಾನಸಿಕ ಅಸ್ವಸ್ಥ ಎಂದರೆ ಕೇಸ್ ನಿಂದ ಪಾರಾಗುವುದು ಸುಲಭ. ಈ ಕಾರಣಕ್ಕೆ ಆತನಿಗೆ ಈ ಹಣೆ ಪಟ್ಟಿ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವತಃ ಮಾಲಿಕ ಕರ್ಣನೇ ಪ್ರತಿಕ್ರಿಯೆ ನೀಡಿದ್ದಾರೆ. ‘ಆತ ಮಾನಸಿಕ ಅಸ್ವಸ್ಥ ಎಂದು ಹೇಳುತ್ತಿದ್ದಾರೆ. ಮಾನಸಿಕ ಅಸ್ವಸ್ಥನೇ ಆಗಿದ್ದರೆ ಜಾಸ್ತಿ ಹಾಲು ಕೊಡುವ ಹಸುವನ್ನೇ ಗುರುತಿಸಿ ಕ್ರೌರ್ಯ ಮೆರೆಯಲು ಹೇಗೆ ಸಾಧ್ಯ? ಅವನ ಅಡ್ರೆಸ್ ಹೇಳಿದ್ರೆ ಅವನು ಯಾರು ಅಂತ ಹೇಳ್ತೀನಿ ನಾನು. ಅವನು ಎಲ್ಲಿ ಕೆಲಸ ಮಾಡ್ತಾನೆ ಅಂತಾನೂ ಹೇಳ್ತೀನಿ.ಬೇಕೆಂದೇ ಮಾಡಿದ್ದಾರೆ ಸಾರ್’ ಎಂದು ಅಳಲು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments