Select Your Language

Notifications

webdunia
webdunia
webdunia
webdunia

ನಾಳೆ ಚಾಮರಾಜಪೇಟೆ ಬಂದ್!?

ನಾಳೆ ಚಾಮರಾಜಪೇಟೆ ಬಂದ್!?
ಬೆಂಗಳೂರು , ಸೋಮವಾರ, 11 ಜುಲೈ 2022 (14:28 IST)
ಬೆಂಗಳೂರು : ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿಂದತೆ ನಾಳೆ ಚಾಮರಾಜಪೇಟೆ ಬಂದ್ಗೆ ಕರೆ ಕೊಡಲಾಗಿದೆ.

ಹೌದು. ನಾಳೆ ಬೆಳಗ್ಗೆ 8 ರಿಂದ ಸಂಜೆ 5 ಗಂಟೆ ತನಕ ಚಾಮರಾಜಪೇಟೆ ಬಂದ್ ಮಾಡುವಂತೆ ನಾಗರೀಕ ಒಕ್ಕೂಟ ಕರೆ ಕೊಟ್ಟಿದೆ. ಪ್ರತಿಭಟನೆಗೆ ಹಿಂದೂ ಸಂಘಟನೆಗಳು ಕೂಡ ಸಾಥ್ ನೀಡುತ್ತಿವೆ. ಈ ಮೂಲಕ ಬಂದ್ ತೀವೃಗೊಳಿಸಲು ಸಂಘಟನೆಗಳು ಕೂಡ ಮುಂದಾಗಿವೆ.

ಚಾಮರಾಜಪೇಟೆ ವಕ್ಫ್ ಗೆ ಸೇರಬಾರದು ಅದು ಆಟದ ಮೈದಾನವಾಗಿಯೇ ಉಳಿಯಬೇಕು ಎನ್ನುವ ನಿಟ್ಟಿನಲ್ಲಿ ಈ ಬಂದ್ ನಡೆಯಲಿದೆ.

ವ್ಯಾಪಾರ ಚಟುವಟಿಕೆಯ ಕೇಂದ್ರವಾಗಿರುವ ಬೆಂಗಳೂರಿನ ಚಾಮರಾಜಪೇಟೆ ಬಂದ್ಗೆ ಈಗಾಗಲೇ ನಾಗರೀಕ ಒಕ್ಕೂಟ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಈಗಾಗಲೇ ಎಲ್ಲಾ ಅಂಗಡಿ ಮುಗ್ಗಟ್ಟು ಮನೆ ಮನೆಗಳಿಗೆ ಕರ ಪತ್ರ ಹಂಚಲಾಗಿದೆ.

ಚಾಮರಾಜಪೇಟೆ ಅಂಗಡಿಗಳ ಗೋಡೆ, ಬ್ಯಾಂಕ್ಗಳ ಮುಂದೆ ಮುಂದೆ ಬಂದ್ ಗೆ ಸಂಪೂರ್ಣ ಬೆಂಬಲ ನೀಡುವಂತೆ ಪೋಸ್ಟರ್ ಅಂಟಿಸಲಾಗಿದೆ. ಆಟೋಗಳ ಮೂಲಕ ಬಂದ್ ಬಗ್ಗೆ ಅನೌನ್ಸ್ಮೆಂಟ್ ಮಾಡಲಾಗುತ್ತಿದೆ. ಇಷ್ಟು ಮಾತ್ರವಲ್ಲದೆ ಬಿಬಿಎಂಪಿ ಕಚೇರಿಗೂ ಬಿತ್ತಿ ಪತ್ರ ಅಂಟಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇಂದಿನಿಂದಲೇ ಕಣ್ಗಾವಲು ಇರಿಸಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ರೈಲುಗಳ ಸಂಚಾರ ಸಂಪೂರ್ಣ ರದ್ದು!