Webdunia - Bharat's app for daily news and videos

Install App

ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಪ್ರಕರಣ: ಹಸುಗಳಿಗೆ ಪೂಜೆ ಮಾಡಿ ಬಿಜೆಪಿ ಸಂಕ್ರಾಂತಿ ಆಚರಣೆ ವಿಡಿಯೋ

Krishnaveni K
ಮಂಗಳವಾರ, 14 ಜನವರಿ 2025 (11:36 IST)
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಸಂತ್ರಸ್ತ ಮಾಲಿಕರ ಮನೆಯಲ್ಲಿ ಇಂದು ಬಿಜೆಪಿ ನಾಯಕರು ಹಸುಗಳಿಗೆ ಗೋಪೂಜೆ ಮಾಡಿ ಸಂಕ್ರಾಂತಿ ಆಚರಿಸಿದರು.

ಇಂದು ಬೆಳಿಗ್ಗೆಯೇ ಬಿಜೆಪಿ ನಾಯಕರಾದ ಬಿವೈ ವಿಜಯೇಂದ್ರ, ಆರ್ ಅಶೋಕ್, ಭಾಸ್ಕರ್ ರಾವ್ ಸೇರಿದಂತೆ ಹಲವರು ಹಸು ಮಾಲಿಕರ ಮನೆಗೆ ಬಂದು ಅವರಿಗೆ ಸಾಂತ್ವನ ಹೇಳಿದರು. ಬಳಿಕ ಹಸುಗಳಿಗೆ ಹೂ, ಹಣ್ಣು ನೀಡಿ ಪೂಜೆ ಸಲ್ಲಿಸಿದರು.

ಇದೇವೇಳೆ ತಂಡವು ಹಸುಗಳ ಮಾಲೀಕರಿಗೆ ಧೈರ್ಯ ತುಂಬಿತು. ಸರಕಾರದ ನಿಷ್ಕ್ರಿಯತೆ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟ ಕುರಿತು ತಂಡವು ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಮಕರ ಸಂಕ್ರಾಂತಿಯ ಹಿನ್ನೆಲೆಯಲ್ಲಿ ಗೋಪೂಜೆಯನ್ನೂ ನೆರವೇರಿಸಲಾಯಿತು.

ಇದಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ‘ಚಾಮರಾಜಪೇಟೆಯಲ್ಲಿ ನಡೆದ ಈ ಘಟನೆ ಇಡೀ ದೇಶವೇ ಗಮನಿಸಿದೆ. ಎಲ್ಲಾ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹದ್ದೊಂದು ಘಟನೆ ಇದುವರೆಗೆ ನಡೆದಿರಲಿಲ್ಲ. ಇದು ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆ ಪಾಲನೆ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಭಾರತೀಯ ಜನತಾ ಪಾರ್ಟಿಯ ಪರವಾಗಿ ನಾವು ಇಂತಹ ಕೃತ್ಯವೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇವೆ’ ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Narendra Modi: ಆ ಉಗ್ರರಿಗೆ ನಿರೀಕ್ಷೆಯೇ ಮಾಡಿರದ ಸಾವು ಕರುಣಿಸಲಿದ್ದೇವೆ: ಪ್ರಧಾನಿ ಮೋದಿ

Pehalgam: ಪುರಿ ದೇವಾಲಯದಲ್ಲೇ ಗರುಡ ನೀಡಿದ್ದನಾ ಪಹಲ್ಗಾಮ್ ದುರ್ಘಟನೆಯ ಸೂಚನೆ

Arecanut price today: ಇಂದಿನ ಅಡಿಕೆ, ಕಾಳುಮೆಣಸು ದರ ವಿವರ ಇಲ್ಲಿದೆ

Gold Price today: ಲಕ್ಷದ ಗಡಿ ದಾಟಿದ್ದ ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

ಭಾರತದ ಕಟ್ಟುನಿಟ್ಟಿನ ಕ್ರಮಕ್ಕೆ ಬೆದರಿದ ಪಾಕಿಸ್ತಾನ: ಅರ್ಜೆಂಟ್ ಮೀಟಿಂಗ್

ಮುಂದಿನ ಸುದ್ದಿ
Show comments