Webdunia - Bharat's app for daily news and videos

Install App

ಚಾಣಕ್ಯ ವಿವಿ ಮನುವಾದಿಗಳ ಯೂನಿವರ್ಸಿಟಿಯಾಗಲಿದೆ : ಸಿದ್ದರಾಮಯ್ಯ ಆರೋಪ

Webdunia
ಬುಧವಾರ, 22 ಸೆಪ್ಟಂಬರ್ 2021 (13:15 IST)
ಬೆಂಗಳೂರು : ಚಾಣಕ್ಯ ವಿವಿ ವಿಧೇಯಕವನ್ನು ಚರ್ಚೆಗೆ ಅವಕಾಶ ನೀಡದೆ ತರಾತುರಿಯಲ್ಲಿ ರಾಜ್ಯ ಸರ್ಕಾರ ಅಂಗೀಕರಿಸಿದೆ. ಚಾಣಕ್ಯ ವಿವಿ ಮನುವಾದಿಗಳ ಯೂನಿವರ್ಸಿಟಿಯಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಣಕ್ಯ ವಿವಿ ಮನುವಾದಿಗಳ ಯೂನಿವರ್ಸಿಟಿಯಾಗಲಿದೆ. ನಾನು ಚಾಣಕ್ಯ ಬಗ್ಗೆ ಹೇಳಲ್ಲ, ಸಂಸ್ಥೆಯ ಬಗ್ಗೆ ಹೇಳುತ್ತಿದ್ದೇನೆ. ಈ ಆರ್ಎಸ್ಎಸ್ನವರು ಮನುವಾದಿಗಳು. ಮತ್ತೆ ಚತುರ್ವರ್ಣ ಜಾರಿ ಮಾಡುವುದಕ್ಕೆ ಹೊರಟಿದ್ದಾರೆ. ಅಂತಹ ಚಾಣಕ್ಯ ವಿವಿ ವಿಧೇಯಕವನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ ಎಂದು ಹೇಳಿದ್ದಾರೆ.
ಚಾಣಕ್ಯ ವಿವಿಯನ್ನು ನಡೆಸುತ್ತಿರುವುದು ಸೆಸ್ ಸಂಸ್ಥೆ. ಸೆಸ್ ಸಂಸ್ಥೆ ನಡೆಸುತ್ತಿರುವವರು ಆರ್ ಎಸ್ಎಸ್ ನವರು. 50 ಕೋಟಿ ರೂಪಾಯಿಗೆ 116 ಎಕರೆ ಭೂಮಿಯನ್ನ ನೀಡಿದ್ದಾರೆ. ಸರ್ಕಾರ ರೈತರಿಗೆ 175 ಕೋಟಿ ರೂಪಾಯಿ ಪರಿಹಾರ ನೀಡಿದೆ. ರೈತರಿಂದ ಸ್ವಾಧೀನಪಡಿಸಿಕೊಂಡು ಭೂಮಿ ಅಭಿವೃದ್ಧಿಪಡಿಸಿದ್ದಾರೆ. ಈ ಭೂಮಿ 300ರಿಂದ 400 ಕೋಟಿ ರೂ. ಬೆಲೆ ಬಾಳುತ್ತದೆ. ಆದರೆ ಸರ್ಕಾರ ಈಗ ಸೆಸ್ ಸಂಸ್ಥೆಗೆ ಭೂಮಿಯನ್ನು ನೀಡಿದೆ. ಸೆಸ್ ಸಂಸ್ಥೆಯಲ್ಲಿ ಯಾವುದೇ ಶಿಕ್ಷಣ ಸಂಸ್ಥೆಗಳೇ ಇಲ್ಲ. ಸೆಸ್ ಸಂಸ್ಥೆಗೆ ಸರ್ಕಾರ ಭೂಮಿ ನೀಡಿರುವುದು ದೊಡ್ಡ ಹಗರಣ ಎಂದು ಸಿದ್ದರಾಮಯ್ಯ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments