Webdunia - Bharat's app for daily news and videos

Install App

ನಾಳೆ ಮೈಸೂರಿಗೆ ಚಾಣಕ್ಯ ಭೇಟಿ

geetha
ಶನಿವಾರ, 10 ಫೆಬ್ರವರಿ 2024 (21:00 IST)
ಮೈಸೂರು-ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಂಬಂಧ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಈ ವೇಳೆ ಪಕ್ಷದ ಸಂಘಟನೆ ಕುರಿತಂತೆ ಸಭೆಗಳನ್ನೂ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ಕುರಿತಂತೆ ಮುಂದಿನ ರಣತಂತ್ರ ರೂಪಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವ ಚಾಣಕ್ಯ ಅಮಿತ್ ಶಾ ಅವರು ಭಾನುವಾರ ಮೈಸೂರಿನಲ್ಲಿ ರಾಜ್ಯ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ಕಮಿಟಿ ಸಭೆ ನಡೆಸಲಿದ್ದಾರೆ.
 
ವಾಸ್ತವವಾಗಿ ಈ ಭೇಟಿ ವೇಳೆ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿ ಪಕ್ಷ ಸಭೆಗಳನ್ನು ನಡೆಸುವುದು ಈ ಮೊದಲು ನಿರ್ಧಾರವಾಗಿತ್ತು. ಬಳಿಕ ಸಮಯದ ಅಭಾವದ ಕಾರಣ ಬದಲಾವಣೆ ಮಾಡಲಾಯಿತು. ಇದೀಗ ಭಾನುವಾರ ಮೈಸೂರಿನಲ್ಲೇ ಪಕ್ಷದ ಸಭೆಗಳನ್ನು ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.
 
ಆ ಪ್ರಕಾರ, ಭಾನುವಾರ ಮಧ್ಯಾಹ್ನ 3 ಗಂಟೆಗೆ ಮೈಸೂರು, ಚಾಮರಾಜನಗರ, ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡ ಮೈಸೂರು ಕ್ಲಸ್ಟರ್ ನ ಪಕ್ಷದ ಬೂತ್ ಅಧ್ಯಕ್ಷರು ಹಾಗೂ ಪ್ರಮುಖ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅಮಿತ್ ಶಾ ಅವರು ಮಾತನಾಡಲಿದ್ದಾರೆ. ಸುಮಾರು ಹತ್ತು ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments