Webdunia - Bharat's app for daily news and videos

Install App

ಮುಂದಿನ 3 ದಿನ ಮಳೆ ಸಾಧ್ಯತೆ

Webdunia
ಬುಧವಾರ, 13 ಜುಲೈ 2022 (22:10 IST)
ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನೂ ಮೂರು ದಿನ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಿಸಿಲು ನಾಡು ಉತ್ತರ ಕರ್ನಾಟಕ ಅಕ್ಷರಶಃ ಮಲೆನಾಡು ಆಗಿ ಬದಲಾಗಿದೆ. ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಗೆ ಎಲ್ಲೆಡೆ ಹಸಿರ ವಾತಾವರಣ ಕಾಣಿಸುತ್ತಿದೆ. ತುಂತುರು ಮಳೆಯ ಜೊತೆಗೆ ಗಾಳಿಯ ವೇಗ ಸಹ ಸ್ವಲ್ಪ ಹೆಚ್ಚಿದೆ. ವಿಜಯಪುರ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ಯಾದಗಿರಿಯಲ್ಲಿ ಬೆಳಗಿನ ಜಾವ ಮಂಜು ಹಿತ ನೀಡುತ್ತಿದೆ. ಹವಾಮಾನದಲ್ಲಿ ವೈಪರಿತ್ಯದಿಂದಾಗಿ ಜನರಲ್ಲಿ ಜ್ವರ, ಶೀತ ಸಂಬಂಧಿತ ರೋಗ ಲಕ್ಷಣಗಳು ಕಾಣಿಸುತ್ತಿವೆ. ಮಹಾರಾಷ್ಟ್ರದ  ಮಹಾಮಳೆಗೆ ಕೃಷ್ಣಾ ಹಾಗೂ ಭೀಮಾನದಿಗೆ ಒಳಹರಿವು ಹೆಚ್ಚಳವಾಗಿದೆ. ಕೊಡಗು ಭಾಗದಲ್ಲಿ ಮಳೆ ಕೊಂಚ ಇಳಿಕೆಯಾಗಿದ್ದು, ಆದ್ರೆ ಪ್ರವಾಹದ ಆತಂಕ ಜನರಲ್ಲಿದೆ. ಮಳೆಯಿಂದಾಗಿ ಕೆಲ ಮನೆಗಳಿಗೆ ಹಾನಿಯುಂಟಾಗಿದೆ. ಕೊಡಗು ಜಿಲ್ಲೆಯ ನದಿ, ಉಪನದಿಗಳು ತುಂಬಿ ಹರಿಯುತ್ತಿವೆ. ನದಿ ತೀರದ ದೇವಸ್ಥಾನಗಳಲ್ಲಿ ಬ್ಯಾರಿಕೇಡ್ ಹಾಕಿ ಭಕ್ತರು ನೀರಿಗೆ ಇಳಿಯದಂತೆ ನಿರ್ಬಂಧ ಹಾಕಲಾಗ್ತಿದೆ. ನದಿಯ ಮಟ್ಟ ಇಳಿಕೆಯಾಗುವರೆಗೂ ಭಕ್ತರ ಪುಣ್ಯ ಸ್ನಾನಕ್ಕೆ ಬ್ರೇಕ್ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಮುಂದಿನ ಸುದ್ದಿ
Show comments