Webdunia - Bharat's app for daily news and videos

Install App

ಜನರ ಶ್ರೇಯಸ್ಸಿಗಾಗಿ ಚಂಡಿಕಾ ಹೋಮ

Webdunia
ಬುಧವಾರ, 24 ಅಕ್ಟೋಬರ್ 2018 (23:16 IST)
ಶಕ್ತಿದೇವತೆಯ ನೆಲೆವೀಡಾಗಿರೋ ಹೊರನಾಡಿನಲ್ಲಿ ಸಂಭ್ರಮ ಸಡಗರ ಮೇಳೈಸಿತ್ತು. ನವರಾತ್ರಿಯ ಕೊನೆಯ ದಿನ ದ್ವಾದಶಿಯಾಗಿದ್ದು, ಕ್ಷೇತ್ರದಲ್ಲಿ ಮಹಾಚಂಡಿಕಾಯಾಗ ನೆರವೇರಿತು. ಲೋಕಕಲ್ಯಾಣಾರ್ಥವಾಗಿ ನಡೆದ ಈ ಪವಿತ್ರ ಕಾರ್ಯವನ್ನು ಕಣ್ತುಂಬಿಕೊಳ್ಳಲು ಅನ್ನಪೂರ್ಣೇಶ್ವರಿಯ ಬೀದಿಗೆ ಭಕ್ತರ ದಂಡೇ ಹರಿದು ಬಂದಿತ್ತು.

11 ದಿನಗಳ ಕಾಲ ನಡೆದ ನವರಾತ್ರಿ ಉತ್ಸವಕ್ಕೆ ಹೊರನಾಡಿನಲ್ಲಿ ವಿದ್ಯುಕ್ತ ತೆರೆ ಬಿದ್ದಿದೆ. ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿರೋ ಹೊರನಾಡಿನಲ್ಲಿ 11 ದಿನಗಳ ಕಾಲ ನವರಾತ್ರಿಯನ್ನು ಅದ್ದೂರಿಯಾಗಿ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು.

ನಿತ್ಯವೂ ಅನ್ನಪೂರ್ಣೇಶ್ವರಿಯನ್ನು ವಿವಿಧ ಅಲಂಕಾರಗಳಿಂದ ಸಿಂಗರಿಸಲಾಗಿತ್ತು. ಕೊನೆಯ ದಿನ ದ್ವಾದಶಿಯಾಗಿದ್ದು ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥವಾಗಿ ಮಹಾಚಂಡಿಕಾ ಹೋಮವನ್ನು ನಡೆಸಲಾಯಿತು. ಋತ್ವಿಜರು ಸಾಮೂಹಿಕವಾಗಿ ಧಾರ್ಮಿಕ ಕೈಂಕರ್ಯಗಳೊಂದಿಗೆ ಚಂಡಿಕಾ ಹೋಮವನ್ನು ನೆರವೇರಿಸಿದರು. ಮಹಾಚಂಡಿಕಾ ಹೋಮವನ್ನು ನಡಿಸೋದ್ರಿಂದ ಜಗತ್ತಿನೆಲ್ಲೆಡೆ ಸಮೃದ್ದಿ, ಸಂರಕ್ಷಣೆ ನೆಲೆಸಲಿದೆ ಅನ್ನೋ ನಂಬಿಕೆ ಭಕ್ತರಲ್ಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ವರ್ಷಂಪ್ರತಿ ದ್ವಾದಶಿಯಂದು ಮಹಾಚಂಡಿಕಾ ಹೋಮವನ್ನು ನಡೆಸಲಾಗುತ್ತೇ ಅಂತಾರೆ ಧರ್ಮಕರ್ತರು.

ಮಹಾಚಂಡಿಕಾ ಹೋಮದ ಪ್ರಯುಕ್ತ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿಯನ್ನು ಬಗೆಬಗೆಯ ಹೂವುಗಳಿಂದ ಸಿಂಗರಿಸಲಾಗಿತ್ತು. ಅನ್ನದಾತೆಗೆ ಹೋಮದ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ, ಅರ್ಚನೆಯನ್ನು ನೆರವೇರಿಸಲಾಯಿತು. ದೇಗುಲದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆದ ಈ ಮಹಾಚಂಡಿಕಾ ಹೋಮದಲ್ಲಿ ಧರ್ಮದರ್ಶಿ ಕುಟುಂಬ ಹಾಗೂ ಭಕ್ತರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments