Webdunia - Bharat's app for daily news and videos

Install App

ಅನ್ನಭಾಗ್ಯ ಯೋಜನೆಯಲ್ಲಿ ಮಹತ್ತರ ಬದಲಾವಣೆ ಏನಿದು ಇಲ್ಲಿದೆ ವಿವರ

Krishnaveni K
ಬುಧವಾರ, 14 ಆಗಸ್ಟ್ 2024 (12:19 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಇನ್ನು ಮುಂದೆ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಸಚಿವ ಕೆಎಚ್ ಮುನಿಯಪ್ಪ ಸುಳಿವು ನೀಡಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಸಿದ್ದರಾಮಯ್ಯ ಸರ್ಕಾರ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು. ಆದರೆ ಅಕ್ಕಿಯ ಅಭಾವದಿಂದಾಗಿ 5 ಕೆಜಿ ಅಕ್ಕಿ ನೀಡಿ ಉಳಿದ 5 ಕೆಜಿ ಅಕ್ಕಿಯ ಬಾಬ್ತು ಫಲಾನುಭವಿಗಳ ಖಾತೆಗೆ ಹಣ ನೀಡಲಾಗುತ್ತಿತ್ತು. ಆದರೆ ಇದೀಗ 5 ಕೆಜಿ ಅಕ್ಕಿಯ ಹಣದ ಬದಲು ಇತರೆ ವಸ್ತುಗಳನ್ನು ನೀಡುವ ಸಾಧ್ಯತೆಯಿದೆ.

ಇನ್ನುಳಿದ 5 ಕೆಜಿ ಅಕ್ಕಿಯ ಬದಲು ಹಣ ಪಡೆಯುವುದಕ್ಕಿಂತ ಬೇಳೆ, ಸಕ್ಕರೆ, ಎಣ್ಣೆ ಇತ್ಯಾದಿ ವಸ್ತುಗಳನ್ನು ನೀಡಬೇಕು ಎಂದು ಜನ ಬೇಡಿಕೆಯಿಡುತ್ತಿದ್ದಾರಂತೆ. ಹೀಗಾಗಿ ಇನ್ನು ಮುಂದೆ ಹಣದ ಬದಲು ಬೇರೆ ವಸ್ತುಗಳನ್ನು ನೀಡಲು ಚಿಂತನೆ ನಡೆಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.

ಈ ಬಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ಖಾತೆ ಸಚಿವ ಪ್ರಲ್ಹಾದ್ ಜೋಶಿಯವರನ್ನು ಭೇಟಿ ಮಾಡಿ ಮುನಿಯಪ್ಪ ಮಾತುಕತೆ ನಡೆಸಿದ್ದಾರೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಒದಗಿಸಲು ಕೇಂದ್ರದ ಸಹಾಯ ಕೋರಿದ್ದಾರೆ. ರಾಜ್ಯದ ಜನರ ಅವಶ್ಯಕತೆಗೆ ಅನುಗುಣವಾಗಿ ಅಕ್ಕಿ ಖರೀದಿಸಲಿದ್ದೇವೆ ಎಂದು ಮುನಿಯಪ್ಪ ಹೇಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿ ಅಡಕೆ ಬೆಳೆಗಾರರು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ಸಂಸದರು

Karnataka Weather: ಇಂದು ಮಳೆಯ ಅಬ್ಬರವಿರಲಿದೆಯಾ ಇಲ್ಲಿದೆ ಹವಾಮಾನ ವರದಿ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments