ಬಟ್ಟೆ ಬದಲಾಯಿಸೋ ನೆಪ: ಆಕೆ ಮಾಡಿದ್ದಾದ್ರು ಏನು?

Webdunia
ಶನಿವಾರ, 18 ಡಿಸೆಂಬರ್ 2021 (09:11 IST)
ಬೆಂಗಳೂರು : ಬಟ್ಟೆ ಬದಲಿಸುವ ನೆಪದಲ್ಲಿ ಸ್ನೇಹಿತೆಯ ಮನೆ ನುಗ್ಗಿ ಯುವತಿಯೊಬ್ಬಳು ಚಿನ್ನ ಮತ್ತು ಹಣವನ್ನು ಕದ್ದ ಘಟನೆ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದೆ.

ಅಜ್ರಾ ಸಿದ್ದಿಕ್(26) ಆರೋಪಿ. ಎರಡು ದಿನದ ಹಿಂದೆ ಆಕೆ ಗೆಳತಿ ಮನೆಗೆ ಬಂದಿದ್ದು, ಬಟ್ಟೆ ಬದಲಾಯಿಸುವ ನೆಪದಲ್ಲಿ ಚಿನ್ನಾಭರಣ ಮತ್ತು 11 ಲಕ್ಷ ನಗದು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾಳೆ.

ಮಧ್ಯಾಹ್ನ 3.40ರ ವೇಳೆಗೆ ಮನೆಗೆ ಬಂದ ಅಜ್ರಾಳಿಗೆ ಗೆಳತಿ ರೂಮ್ನಲ್ಲಿದ್ದ ಕರ್ಬೋಡ್ಗೆ ಬೀಗ ಹಾಕದಿರುವುದು ಕಣ್ಣಿಗೆ ಬಿದ್ದಿರುತ್ತದೆ. ಬಳಿಕ ಆಕೆ ಪದೇ ಪದೇ ಬಟ್ಟೆ ಬದಲಾಯಿಸುವ ನೆಪದಲ್ಲಿ ಈ ಕೃತ್ಯ ಎಸಗಿದ್ದಾಳೆ.

ಇತ್ತ ರಾತ್ರಿ ಲಾಕರ್ ನೋಡಿದ ಸ್ನೇಹಿತೆಗೆ ಮನೆಯಲ್ಲಿ ಕಳ್ಳತನ ಆಗಿರುವುದು ಗೊತ್ತಾಗುತ್ತದೆ. ಬಳಿಕ ಪೊಲೀಸರಿಗೆ ದೂರು ನೀಡಿದಾಗ ಅಜ್ರಾ ಕಳ್ಳತನ ಮಾಡಿರುವುದಾಗಿ ತಿಳಿಯುತ್ತದೆ. ನಂತರ ಪೊಲೀಸರು ಆಕೆಯನ್ನು ಬಂಧಿಸುತ್ತಾರೆ.

ವಿಚಾರಣೆ ವೇಳೆ ಚಿನ್ನಾಭರಣ ಮತ್ತು ಹಣ ಎಲ್ಲಿದೆ ಎಂದು ಕೇಳಿದಾಗ ತನ್ನ ಮನೆ ಪಕ್ಕದ ನೀರಿನ ಟ್ಯಾಂಕಿಯಲ್ಲಿ ಕವರ್ನೊಳಗೆ ಮುಚ್ಚಿಟ್ಟಿರುವುದಾಗಿ ಹೇಳುತ್ತಾಳೆ. ಇದರ ಕುರಿತು ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಯ ಕೈಯಿಂದ ಚಿನ್ನಾಭರಣವನ್ನು ವಶ ಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments