Select Your Language

Notifications

webdunia
webdunia
webdunia
webdunia

ವಿಪಕ್ಷ ನಾಯಕನ ಬದಲಾವಣೆ: ಸತ್ಯಾಂಶವಿಲ್ಲ ಎಂದ ಬಿವೈ ವಿಜಯೇಂದ್ರ

ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Sampriya

ಬೆಂಗಳೂರು , ಗುರುವಾರ, 26 ಜೂನ್ 2025 (18:19 IST)
ಬೆಂಗಳೂರು: ವಿಪಕ್ಷ ನಾಯಕ ಸ್ಥಾನದಿಂದ ಆರ್‌ ಆಶೋಕ್ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. 

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಗೆ ವೈಯಕ್ತಿಕ ಕಾರಣಕ್ಕೆ ಪ್ರಯಾಣ ಬೆಳೆಸಿದ್ದು. ಆರ್ ಅಶೋಕ್ ವಿರೋಧ ಪಕ್ಷದ ನಾಯಕರು. ಅವರು ದೆಹಲಿಗೆ ಹೋಗಬಾರದು ಎಂದು ಇದ್ಯಾ? ಬೇರೆ ಕಾರಣಕ್ಕಾಗಿ ಹೋಗಿದ್ದಾರೆ. ರಾಜ್ಯಾಧ್ಯಕ್ಷನಾಗಿ ಕಳೆದ ಒಂದು ವರ್ಷದಲ್ಲಿ ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ ತೃಪ್ತಿ ಇದೆ ಎಂದರು. 


ವಿರೋಧ ಪಕ್ಷದ ನಾಯಕನಾಗಿ ಆರ್ ಅಶೋಕ್ ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಸ್ಥಾನ ಬದಲಾವಣೆ ಸಂಬಂಧ ಹರಿದಾಡುತ್ತಿರುವ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲವೆಂದು ಸ್ಪಷ್ಟನೆ ನೀಡಿದರು. 

ಪಕ್ಷದೊಳಗಿನ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಅಸಮಾಧಾನ ತೋಡಿಕೊಂಡಿರುವವರು ಪಕ್ಷದ ಹೊರಗಿದ್ದಾರೆ. ಕೆಲವರು ಸಣ್ಣ ಪುಟ್ಟ ಅಭಿಪ್ರಾಯ ತಿಳಿಸಿದ್ದಾರೆ. ಏನೇ ಸಮಸ್ಯೆ ಇದ್ದರೂ ಪರಿಹರಿಸಬೇಕು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಎಲ್ಲವೂ ಬಗೆಹರಿಯಲಿಗೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಗುಡ್ಡಕುಸಿತ: ಶಿರಾಡಿ ಘಾಟ್ ಬಂದ್, ಬೆಂಗಳೂರು– ಮಂಗಳೂರು ಸಂಪರ್ಕ ಕಡಿತ