ಬದಲಾಯ್ತು ಮೋದಿ ಪ್ರೊಫೈಲ್ ಫೋಟೊ

Webdunia
ಮಂಗಳವಾರ, 2 ಆಗಸ್ಟ್ 2022 (19:48 IST)
ಸ್ವಾತಂತ್ರ್ಯ ದಿನಾಚರಣೆಯ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇತ್ತೀಚೆಗೆ ನಡೆದ ‘ಮನ್ ಕಿ ಬಾತ್’ ಮಾಸಿಕ ರೇಡಿಯೊ ಕಾರ್ಯಕ್ರಮದಲ್ಲಿಯೂ ಪ್ರಧಾನಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿದ್ದರು. ‘ಸಾಮಾಜಿಕ ಮಾಧ್ಯಮಗಳಲ್ಲಿಯೂ ದೇಶದ ಹಿರಿಮೆ ಹೆಚ್ಚಿಸುವಂಥ ಪೋಸ್ಟ್ ಹಂಚಿಕೊಳ್ಳಿ’ ಎಂದು ಸಲಹೆ ಮಾಡಿದ್ದರು..ಇದೀಗ ಸ್ವತಃ ನರೇಂದ್ರ ಮೋದಿ ಅವರೇ ತಮ್ಮ ಟ್ವಿಟರ್ ಮತ್ತು ಫೇಸ್​ಬುಕ್ ಅಕೌಂಟ್​ಗಳಲ್ಲಿ ಪ್ರೊಫೈಲ್ ಇಮೇಜ್ ಬದಲಿಸಿಕೊಂಡು ಉತ್ತಮ ಮಾದರಿಯನ್ನೂ ಹಾಕಿಕೊಂಡಿದ್ದಾರೆ..‘ಇಂದು ಆಗಸ್ಟ್ 2. ನಮ್ಮ ದೇಶದ ಇತಿಹಾಸದಲ್ಲಿ ವಿಶೇಷ ದಿನ. ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ನಮ್ಮ ದೇಶದ ಪ್ರತಿ ಮನೆಯಲ್ಲಿಯೂ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗಾ’ ಅಭಿಯಾನ ಆರಂಭವಾಗಿದೆ. ನಾನು ನನ್ನ ಸಾಮಾಜಿಕ ಮಾಧ್ಯಮದ ಡಿಸ್​ಪ್ಲೇ ಇಮೇಜ್ ಬದಲಿಸಿದ್ದೇನೆ. ನೀವೂ ಹೀಗೆ ಮಾಡಬೇಕು ಎಂದು ಕೋರುತ್ತೇನೆ’ ಎಂದು ನರೇಂದ್ರ ಮೋದಿ ಅವರು ಫೇಸ್​ಬುಕ್ ಪೋಸ್ಟ್​ನಲ್ಲಿ ವಿನಂತಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆ, ತಪ್ಪದೇ ಗಮನಿಸಿ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

ಮುಂದಿನ ಸುದ್ದಿ
Show comments