Webdunia - Bharat's app for daily news and videos

Install App

ಚನ್ನಪಟ್ಟಣ ಉಪಚುನಾವಣೆ: ಎನ್‌ಡಿಎ ವಿರುದ್ಧವೇ ಅಖಾಡಕ್ಕೆ ಇಳಿಯುತ್ತಾರಾ ಸಿಪಿ ಯೋಗೇಶ್ವರ್

Sampriya
ಸೋಮವಾರ, 21 ಅಕ್ಟೋಬರ್ 2024 (16:09 IST)
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಸಿ.ಪಿ ಯೋಗೇಶ್ವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆಂಬ ಸುದ್ದಿ ಮೂಲಗಳಿಂದ ತಿಳಿದುಬಂದಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವನಾ ಅಖಾಡ ರಂಗೇರಿದೆ. ಬಿಜೆಪಿ ಅಥವಾ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಇಂಗಿತವನ್ನು ಯೋಗೇಶ್ವರ್ ವ್ಯಕ್ತಪಡಿಸಿದ್ದರು. ಆದರೆ ಚನ್ನಪಟ್ಟಣ ಕ್ಷೇತ್ರವನ್ನು ಕುಮಾರಸ್ವಾಮಿ ಬಿಟ್ಟುಕೊಡಲು ಒಪ್ಪದ ಕಾರಣ ಇದೀಗ ನಿಖಿಲ್ ಕುಮಾರಸ್ವಾಮಿ ಮತ್ತೊಮ್ಮೆ ಚುನಾವಣಾ ಕಣಕ್ಕೆ ಇಳಿಯುವ ಸಾಧ್ಯತೆಯಿದೆ.  

ಕೊನೆ ಕ್ಷಣದವರೆಗೂ ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ ಮಾತನಾಡಿದ್ದ ಯೋಗೇಶ್ವರ್‌, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್‌ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಅಸಮಾಧಾನ ಹೊರಹಾಕಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments