Webdunia - Bharat's app for daily news and videos

Install App

ಚನ್ನಪಟ್ಟಣ ಬೈ ಎಲೆಕ್ಷನ್: ಯಾವ ಬಾಗಿಲೂ ತೆರೆಯದೇ ಇದ್ರೆ ಯೋಗೇಶ್ವರ್ ಮುಂದೆ ಇರೋದೇ ಇದೇ ಆಯ್ಕೆ

Krishnaveni K
ಮಂಗಳವಾರ, 22 ಅಕ್ಟೋಬರ್ 2024 (10:21 IST)
Photo Credit: X
ಬೆಂಗಳೂರು: ಚನ್ನಪಟ್ಟಣ ಬೈ ಎಲೆಕ್ಷನ್ ಮೇಲೆ ಈಗ ಎಲ್ಲರ ದೃಷ್ಟಿ ನೆಟ್ಟಿದೆ. ಬಿಜೆಪಿ ಟಿಕೆಟ್ ಸಿಗದೇ ಸಿಡಿದೆದ್ದಿರುವ ಸಿಪಿ ಯೋಗೇಶ್ವರ್ ಚಿತ್ತ ಯಾವ ಕಡೆಗೆ ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಸಿಪಿ ಯೋಗೇಶ್ವರ್ ಗೆ ಬಿಜೆಪಿಯಿಂದ ಟಿಕೆಟ್ ಕೊಡಲು ಪಕ್ಷದ ಸಹಮತವಿದೆ. ಆದರೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಬಿಟ್ಟುಕೊಡಲು ತಯಾರಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಬಿಜೆಪಿ ಹೈಕಮಾಂಡ್ ಬೆಂಬಲ ಕುಮಾರಸ್ವಾಮಿಯವರಿಗಿದೆ. ಇದು ಅವರಿಗೆ ಆನೆಬಲ ಬಂದಂತಾಗಿದೆ.

ಹೀಗಾಗಿ ಬಿಜೆಪಿ ಟಿಕೆಟ್ ಸಿಗುವುದು ಕಷ್ಟ. ಇನ್ನೊಂದೆಡೆ ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಅವರ ಪುತ್ರಿ ನಿಶಾರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಇನ್ನೊಂದೆಡೆ ಚನ್ನಪಟ್ಟಣ ಟಿಕೆಟ್ ಡಿಕೆ ಶಿವಕುಮಾರ್ ಅಷ್ಟು ಸುಲಭವಾಗಿ ಹೊರಗಿನಿಂದ ಬಂದವರಿಗೆ ಬಿಟ್ಟುಕೊಡುವ ಸಾಧ್ಯತೆಯಿಲ್ಲ.

ಹೀಗಾಗಿ ಅತ್ತ ಬಿಜೆಪಿ ಟಿಕೆಟ್ ಇಲ್ಲ, ಇತ್ತ ಕಾಂಗ್ರೆಸ್ ಟಿಕೆಟ್ ಇಲ್ಲ ಎನ್ನುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಯೋಗೇಶ್ವರ್ ಸ್ವತಂತ್ರವಾಗಿ ಸ್ಪರ್ಧೆ ಮಾಡಬೇಕಾಗುತ್ತದೆ. ಅತ್ತ ಕಾಂಗ್ರೆಸ್ ವಿರೋಧ ಕಟ್ಟಿಕೊಂಡು ಇತ್ತ ಜೆಡಿಎಸ್ ಗೆ ಶತ್ರುವಾಗಿ ಯೋಗೇಶ್ವರ್ ಗೆ ಇಲ್ಲಿ ಗೆಲುವು ಸುಲಭವಲ್ಲ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments