Webdunia - Bharat's app for daily news and videos

Install App

ಚನ್ನಪಟ್ಟಣ ಉಪಚುನಾವಣೆ: ಯೋಗೇಶ್ವರ್ ಮೇಲೆ ಕುಮಾರಸ್ವಾಮಿ ಕಿಡಿ

Krishnaveni K
ಶುಕ್ರವಾರ, 30 ಆಗಸ್ಟ್ 2024 (11:08 IST)
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎನ್ನುತ್ತಿರುವ ಸಿಪಿ ಯೋಗೇಶ್ವರ್ ಮೇಲೆ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಸಿಟ್ಟಾಗಿದ್ದಾರೆ.

ಇಂದು ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಯಾರು ಎಂಬ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕುಮಾರಸ್ವಾಮಿ ಮಹತ್ವದ ಮೀಟಿಂಗ್ ನಡೆಸಲಿದ್ದಾರೆ. ತಮ್ಮ ಕ್ಷೇತ್ರವನ್ನು ಯೋಗೇಶ್ವರ್ ಗೆ ಬಿಟ್ಟುಕೊಡಲು ಕುಮಾರಸ್ವಾಮಿ ತಯಾರಿಲ್ಲ.

ಈ ನಡುವೆ ಯೋಗೇಶ್ವರ್ ಗೇ ಟಿಕೆಟ್ ನೀಡಲು ಕುಮಾರಸ್ವಾಮಿ ಮೇಲೆ ಬಿಜೆಪಿ ನಾಯಕರು ಒತ್ತಡ ಹಾಕುತ್ತಿದ್ದಾರೆ. ಆದರೆ ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡುತ್ತಿರುವ ಯೋಗೇಶ್ವರ್ ಮೇಲೆ ಕುಮಾರಸ್ವಾಮಿ ಕೆಂಡವಾಗಿದ್ದಾರೆ. ಹೀಗಾಗಿ ಇಂದಿನ ಸಭೆಯಲ್ಲಿ ಕುಮಾರಸ್ವಾಮಿ ಮನವೊಲಿಸಲು ಪ್ರಯತ್ನ ನಡೆಯಲಿದೆ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಇಲ್ಲದೇ ಹೋದರೆ ಬಿಎಸ್ ಪಿಯಿಂದಾದರೂ ಸ್ಪರ್ಧೆ ಮಾಡುವುದಾಗಿ ಯೋಗೇಶ್ವರ್ ಹಠ ಹಿಡಿದು ಕುಳಿತಿದ್ದಾರೆ.

ಹೀಗಾಗಿ ಯೋಗೇಶ್ವರ್ ಸ್ಪರ್ಧಯಿಂದ ಹಿಂದೆ ಸರಿಯುವಂತೆ ಮಾಡುವುದು ಸುಲಭವಲ್ಲ. ಹೀಗಾಗಿ ಕುಮಾರಸ್ವಾಮಿ ಮನವೊಲಿಸಲು ಚನ್ನಪಟ್ಟಣ ಕೈತಪ್ಪದಂತೆ ನೋಡಿಕೊಳ್ಳುವ ತಲೆನೋವು ಬಿಜೆಪಿ ನಾಯಕರದ್ದಾಗಿದೆ. ಇದಕ್ಕಾಗಿ ಇಂದಿನ ಸಭೆ ಮಹತ್ವದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments