Channapatna Bye Election: ನಿಖಿಲ್ ಗೆಲುವಿಗೆ ಮುಂಚೆಯೇ ಜೆಡಿಎಸ್ ಸಂಭ್ರಮಾಚರಣೆ

Krishnaveni K
ಶನಿವಾರ, 23 ನವೆಂಬರ್ 2024 (09:28 IST)
ರಾಮನಗರ: ಚನ್ನಪಟ್ಟಣ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಸಿಪಿ ಯೋಗೇಶ್ವರ್ ಮತ್ತು ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ನಡುವೆ ಭಾರೀ ಪೈಪೋಟಿಯಿದೆ. ಹಾಗಿದ್ದರೂ ಜೆಡಿಎಸ್ ಈಗಾಗಲೇ ಸಂಭ್ರಮಾಚರಣೆ ಶುರು ಮಾಡಿದೆ.

ಚನ್ನಪಟ್ಟಣ ಕ್ಷೇತ್ರ ಈ ಬಾರಿ ಭಾರೀ ಪೈಪೋಟಿ ಇದ್ದ ಕ್ಷೇತ್ರ ಎಂದೇ ನಿರೀಕ್ಷಿಸಲಾಗಿತ್ತು. ಅದರಂತೆಯೇ ಈಗ ಮುನ್ನಡೆಯೂ ನಡೆಯುತ್ತಿದೆ. ಒಮ್ಮೆ ಯೋಗೇಶ್ವರ್ ಮುನ್ನಡೆಯಲ್ಲಿದ್ದರೆ ಇನ್ನೊಂದೆಡೆ ನಿಖಿಲ್ ಮುನ್ನಡೆ ಗಳಿಸುತ್ತಿದ್ದಾರೆ. ಪೈಪೋಟಿ ಎನ್ನುವುದಕ್ಕೆ ಮತ್ತೊಂದು ಅರ್ಥವೆನೋ ಎಂಬಂತೆ ಇಲ್ಲಿ ಎಣಿಕೆ ನಡೆಯುತ್ತಿದೆ.

ಹಾಗಿದ್ದರೂ ಈ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳು ನಿರ್ಣಾಯಕವಾಗಿದ್ದು, ಹೀಗಾಗಿ ಜೆಡಿಎಸ್ ನಾವೇ ಗೆಲ್ಲೋದು ಎಂದು ಸಂಭ್ರಮಾಚರಣೆ ಶುರು ಮಾಡಿದ್ದಾರೆ. ರಾಮನಗರದ ವೋಟ್ ಕೌಂಟಿಂಗ್ ಕೇಂದ್ರದ ಬಳಿಕ ಜೆಡಿಎಸ್ ಕಾರ್ಯಕರ್ತರು ಕುಣಿದು ಕುಪ್ಪಳಿಸುತ್ತಿದ್ದಾರೆ.

ಇತ್ತೀಚೆಗಿನ ವರದಿ ಪ್ರಕಾರ ನಿಖಲ್ ಸಾವಿರ ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ. ಆರಂಭಿಕ ಹಂತದಲ್ಲಿ ಯೋಗೇಶ್ವರ್ ಮುನ್ನಡೆಯಲ್ಲಿದ್ದರು. ಹೀಗಾಗಿ ಫಲಿತಾಂಶ ಏನು ಬೇಕಾದರೂ ಆಗಬಹುದು ಎನ್ನುವ ಫೈಟ್ ಇದೆ. ಆದರೆ ಜೆಡಿಎಸ್ ನಾವೇ ಗೆದ್ದಿದ್ದೇವೆ ಎಂದು ಈಗಲೇ ಸಂಭ್ರಮಾಚರಣೆ ಶುರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೃಕ್ಷ ಮಾತೆ, ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

ಮಹಾಘಟಬಂಧನದ ಸಿಎಂ ಅಭ್ಯರ್ಥಿಯಾದ ತೇಜಸ್ವಿ ಯಾದವ್ ಸ್ಥಿತಿ ಶಾಕಿಂಗ್

ಮತ್ತೊಮ್ಮೆ ಸೋತ ರಾಹುಲ್ ಗಾಂಧಿಗೆ ಅಭಿನಂದನೆ, ಕರ್ನಾಟಕದಲ್ಲೂ ಹೀಗೇ ಆಗುತ್ತೆ: ಆರ್ ಅಶೋಕ್

Bihar election result live: ಬಿಹಾರದಲ್ಲಿ ಎನ್ ಡಿಎ ಹೇಗೆ ಗೆಲ್ತಿದೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments