Webdunia - Bharat's app for daily news and videos

Install App

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆದ್ದ ಕರ್ನಾಟಕಕ್ಕೆ ಮುಂದೆ ಇವರೇ ಮುಖ್ಯಮಂತ್ರಿ

Krishnaveni K
ಸೋಮವಾರ, 28 ಅಕ್ಟೋಬರ್ 2024 (10:02 IST)
ಚನ್ನಪಟ್ಟಣ: ಮುಂಬರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವೇ ಆರಿಸಿದ ಸಿಪಿ ಯೋಗೇಶ್ವರ್ ರನ್ನು ಗೆಲ್ಲಿಸುವ ಸವಾಲು ಡಿಸಿಎಂ ಡಿಕೆ ಶಿವಕುಮಾರ್ ಅವರದ್ದು. ಇದೀಗ ಯೋಗೇಶ್ವರ್ ಗೆಲುವಿನಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಬಹುದು ಎಂಬ ಮಾತು ಕೇಳಿಬರುತ್ತಿದೆ.

ಚನ್ನಪಟ್ಟಣದಲ್ಲಿ ಬಿಜೆಪಿ ಟಿಕೆಟ್ ಸಿಗದೇ ಬಂಡಾಯವೆದ್ದಿದ್ದ ಸಿಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಡಿಕೆ ಬ್ರದರ್ಸ್ ಪಾತ್ರ ಮುಖ್ಯವಾದುದು. ಜೊತೆಗೆ ಚನ್ನಪಟ್ಟಣ ಡಿಕೆಶಿಗೆ ತವರಿದ್ದಂತೆ. ಹೀಗಾಗಿ ಇಲ್ಲಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದು ಡಿಕೆಶಿಗೆ ಪ್ರತಿಷ್ಠೆಯ ವಿಚಾರ.

ಒಂದು ವೇಳೆ ಈ ಚುನಾವಣೆಯಲ್ಲಿ ಸಿಪಿ ಯೋಗೇಶ್ವರ್ ಗೆದ್ದರೆ ಡಿಕೆ ಶಿವಕುಮಾರ್ ಗೆ ಬಂಪರ್ ಲಾಟರಿ ಕುದುರಲಿದೆ. ಯೋಗೇಶ್ವರ್  ಒಕ್ಕಲಿಗ ನಾಯಕ. ಅವರನ್ನು ಗೆಲ್ಲಿಸಿದರೆ ಡಿಕೆ ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕಾಂಗ್ರೆಸ್ ವಲಯದಲ್ಲಿ ಚರ್ಚೆ ಜೋರಾಗಿದೆ.

ಕೆಲವು ದಿನಗಳಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ ತಣ್ಣಗಾಗಿತ್ತು. ಆದರೆ ಈಗ ಚನ್ನಪಟ್ಟಣದ ಗೆಲುವು ಮತ್ತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಕಿಡಿ ಜೋರಾಗಿಸಲಿದೆ. ಹೀಗಾಗಿ ಈ ಚುನಾವಣೆ ಕೇವಲ ಯೋಗೇಶ್ವರ್ ಗೆ ಮಾತ್ರವಲ್ಲ, ಡಿಕೆ ಶಿವಕುಮಾರ್ ಗೂ ಮುಖ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments