Webdunia - Bharat's app for daily news and videos

Install App

ತಂಬಾಕು ಬೆಳೆಗಾರರಿಗೆ ಕಂಪನಿಗಳಿಂದ ಮಹಾಮೋಸ?

Webdunia
ಸೋಮವಾರ, 2 ಜುಲೈ 2018 (19:12 IST)
ತಂಬಾಕು ಬೆಳೆಗಾರರಿಗೆ ಕೆಲವು ಖಾಸಗಿ ಕಂಪನಿಗಳು ಮಹಾ ಮೋಸ ಮಾಡುತ್ತಿವೆಯಾ? ಇಂತಹದೊಂದು ಅನುಮಾನ ಬೆಳೆಗಾರರನ್ನು ಕಾಡಲಾರಂಭಿಸಿದೆ. ನಕಲಿ ಕಂಪನಿಯ ನಕಲಿ ಔಷಧ ನಂಬಿದ ರೈತನೊಬ್ಬ ಈಗ ಬೆಳೆ ಬಾರದೇ ಸಂಕಷ್ಟಕ್ಕೆ ಸಿಲುಕಿ ಆರ್ಥಿಕ ನಷ್ಟಕ್ಕೆ ಗುರಿಯಾಗಿದ್ದಾನೆ. 

ನಕಲಿ ಔಷಧ ಕೊಟ್ಟಿದ್ದರಿಂದ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಲಕ್ಕೂರು ಗ್ರಾಮದ  ದೊಡ್ಡೇಗೌಡ ಎಂಬುವರು ತಮ್ಮ 6 ಎಕರೆ ಪ್ರದೇಶದಲ್ಲಿ ನಷ್ಟ ಅನುಭವಿಸುವಂತಾಗಿದೆ. ಗ್ರೀನ್ ಲೈಫ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ತನಗೆ ಮೋಸ ಮಾಡಿದೆ ಎಂದು ಬೆಳಗಾರ ದೂರಿದ್ದಾನೆ. ಕಂಪನಿ ವಿರುದ್ಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಔಷಧ ಸಿಂಪರಣೆ ನಂತರ ತಂಬಾಕು ಸಂಪೂರ್ಣವಾಗಿ ಒಣಗಿದೆ. ಹೀಗಾಗಿ ಕಂಪನಿ ವಿರುದ್ಧ ಕ್ರಮ ಕೈಗೊಂಡು ಸೂಕ್ತ ಪರಿಹಾರ ದೊರಕಿಸಿಕೊಡುವಂತೆ ರೈತ ದೊಡ್ಡೇಗೌಡ ಒತ್ತಾಯಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments