ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿಎಂ ಸಿದ್ದರಾಮಯ್ಯ

Sampriya
ಮಂಗಳವಾರ, 23 ಏಪ್ರಿಲ್ 2024 (18:17 IST)
ಚಿತ್ರದುರ್ಗ: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಚಿತ್ರದುರ್ಗದಲ್ಲಿ ನಡೆದ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಬೃಹತ್ ಜನಸ್ತೋಮವನ್ನು ಉದ್ಘಾಟಿಸಿ ಮಾತನಾಡಿದರು.

ಮೋದಿ ಹತ್ತತ್ತು ವರ್ಷ ಪ್ರಧಾನಿಯಾಗಿ ಭಾರತೀಯರಲ್ಲಿ ಭ್ರಮೆ ಹುಟ್ಟಿಸಿದ್ದು ಬಿಟ್ಟರೆ ಅಭಿವೃದ್ಧಿಯಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ ಎಂದರು.

ವರ್ಷಕ್ಕೆ 2 ಕೋಟಿಯಂತೆ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಸೃಷ್ಟಿಸದ ಮೋದಿ ಕೆಲಸ ಕೇಳಿದ ವಿದ್ಯಾವಂತರಿಗೆ ಹೋಗಿ ಪಕೋಡ ಮಾರಾಟ ಮಾಡಿ ಅಂದರು.

 ನನ್ನ ಕೈಗೆ ಅಧಿಕಾರ ಕೊಡಿ ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು. ಹತ್ತು ವರ್ಷದಲ್ಲಿ ಹದಿನೈದು ಪೈಸೆಯನ್ನೂ ಹಾಕಲಿಲ್ಲ.

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದೋರು ರೈತ ಖರ್ಚು ಮೂರು ಪಟ್ಟು ಮಾಡಿಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಹಾಗಾದ್ರೆ  ಮೋದಿ ಯಾರ ಪರ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ ಎಂದರು.

ಮೋದಿ ಬಂದ ಮೇಲೆ ಜನ ಸಾಮಾನ್ಯರ, ಮಧ್ಯಮ ವರ್ಗದವರ ಮೇಲೆ ತೆರಿಗೆ ಭಾರ ಹೆಚ್ಚಾಯಿತು. ಉದ್ಯಮಿಗಳ ತೆರಿಗೆ ಭಾರ ಕಡಿಮೆ ಆಯಿತು. ಆದ್ದರಿಂದ ಮೋದಿ ಜನದ್ರೋಹಿ ತಾನೆ ಎಂದು ಪ್ರಶ್ನಿಸಿದರು.

ಹೀಗೆ ಮೋದಿಯವರ ವೈಫಲ್ಯಗಳನ್ನು ಪಟ್ಟಿ ಮಾಡುತ್ತಾ ಹೋದರೆ ಹನುಮಂತನ ಬಾಲದಂತೆ ಬೆಳೆಯುತ್ತದೆ ಎಂದರು







ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಜೆಪಿಯಿಂದ ಮಹಾಸಂಪರ್ಕ ಅಭಿಯಾನ, 1 ಕೋಟಿ ಮನೆ ತಲುಪಲಿದ್ದೇವೆ: ಬಿವೈ ವಿಜಯೇಂದ್ರ

ಗಂಡ ಎಂದರೆ ಹೀಗಿರಬೇಕು.. ಆಗ ತಾನೇ ಹುಟ್ಟಿದ ಮಗುವನ್ನು ಬಿಟ್ಟು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments