Select Your Language

Notifications

webdunia
webdunia
webdunia
webdunia

ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದ ಚೆಕ್ ಬೌನ್ಸ್

ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದ  ಚೆಕ್  ಬೌನ್ಸ್
ಬೆಳಗಾವಿ , ಶುಕ್ರವಾರ, 31 ಜನವರಿ 2020 (10:52 IST)
ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಬಿರನಗಡ್ಡಿ ಗ್ರಾಮದ  ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದ 160 ಚೆಕ್ ಗಳು ಬೌನ್ಸ್ ಆಗಿದೆ ಎಂಬುದಾಗಿ ತಿಳಿದುಬಂದಿದೆ.


ಬಿರನಗಡ್ಡಿ ಗ್ರಾಮದ ನೆರೆ ಸಂತ್ರಸ್ತರಿಗೆ ರಾಜ್ಯ ಬಿಜೆಪಿ ಸರ್ಕಾರ ತಲಾ ರೂ. 10 ಸಾವಿರ ರೂ. ಪರಿಹಾರ ನೀಡಿತ್ತು. ಆದರೆ ಈಗ ಪ್ರವಾಹದ ವೇಳೆ ಬಿರನಗಡ್ಡಿ ಸಂಪೂರ್ಣ ಜಲಾವೃತವಾಗಿಲ್ಲ ಎಂದು ಹೇಳಿ ಅಧಿಕಾರಿಗಳು ನೆರೆ ಪರಿಹಾರ ತಡೆಹಿಡಿದಿದ್ದಾರೆ.

ಈ ಹಿನ್ನಲೆಯಲ್ಲಿ ಗ್ರಾಮದ 160 ಜನರಿಗೆ ನೀಡಲಾಗಿದ್ದ ಚೆಕ್ ಗಳು ಬೌನ್ಸ್ ಆಗಿದ್ದು ಸಂತ್ರಸ್ತರು ಪರದಾಡುತ್ತಿದ್ದಾರೆ ಎನ್ನಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಭಾರತಕ್ಕೂ ಕಾಲಿಟ್ಟ ಮಹಾಮಾರಿ ಕರೋನಾ ವೈರಸ್