Webdunia - Bharat's app for daily news and videos

Install App

ಎಚ್.ಡಿ.ದೇವೇಗೌಡರ ಸಮಾವೇಶಕ್ಕೆ ಚಲುವರಾಯ ಸ್ವಾಮಿ ಲೇವಡಿ

Webdunia
ಶುಕ್ರವಾರ, 1 ಜುಲೈ 2016 (14:26 IST)
ನಿನ್ನೆ ನಡೆದ ಜೆಡಿಎಸ್ ಸಮಾವೇಶ ರಾಜಕೀಯ ಸಮಾವೇಶವಾಗಿರಲಿಲ್ಲ. ತಾಲೂಕು ಸಮಾವೇಶವಾಗಿತ್ತು, ಬಾಯಿ ಚಪಲದವರು ನನ್ನ ಬಗ್ಗೆ ಮಾತನಾಡಿದ್ದಾರೆ ಎಂದು ಜೆಡಿಎಸ್ ಬಂಡಾಯ ಶಾಸಕ ಚಲುವರಾಯ ಸ್ವಾಮಿ ಹೇಳಿದ್ದಾರೆ.
 
ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ನಮ್ಮಿಂದ ಅನುಕೂಲವಾಗಿದೆ ಎನ್ನುವುದು ಮನರೆಯಬೇಡಿ. ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಅನ್ಯಾಯದ ಬಗ್ಗೆ ಅವರನ್ನೇ ಕೇಳಿ ಎಂದು ತಿರುಗೇಟು ನೀಡಿದರು.
 
ನಿನ್ನೆ ನಡೆದ ಸಮಾವೇಶಕ್ಕೆ ಹಣ ಕೊಟ್ಟು ಜನರನ್ನು ಕರೆತರಲಾಗಿತ್ತು. ತಾವಾಗಿಯೇ ಜನ ಬಂದಿರಲಿಲ್ಲ ಎಂದು ಲೇವಡಿ ಮಾಡಿದ್ದಾರೆ.
 
ಜೂನ್ 12 ರಿಂದ ಜೆಡಿಎಸ್‌ನಿಂದ ಅಮಾನತ್ತಿನಲ್ಲಿಟ್ಟಿದ್ದೀರಿ. ನಾನು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಸಮಯಾವಕಾಶ ಬೇಕಾಗಿದೆ. ಪೂರ್ಣ ಪ್ರಮಾಣದ ಉತ್ತರ ನೀಡಲು ಮೂರು ತಿಂಗಳು ಕಾಲವಕಾಶ ಕೊಡಿ. ನಮ್ಮನ್ನು ಜೆಡಿಎಸ್‌ನಲ್ಲಿ ಉಳಿಸಿಕೊಳ್ಳಿ ಎಂದು ಕೇಳಿಕೊಳ್ಳುವುದಿಲ್ಲ  ಜೆಡಿಎಸ್ ವರಿಷ್ಠ ದೇವೇಗೌಜರಿಗೆ ಚೆಲುವರಾಯ ಸ್ವಾಮಿ ಟಾಂಗ್ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments