Webdunia - Bharat's app for daily news and videos

Install App

ಶ್ರೀಮಂತರ ಆಸ್ತಿ ಬಡವರಿಗೆ ಮರು ಹಂಚಿಕೆ ಮಾಡಬೇಕು: ಚೇತನ್ ಅಹಿಂಸಾ

Krishnaveni K
ಶನಿವಾರ, 25 ಮೇ 2024 (09:41 IST)
ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅಮೆರಿಕಾದಲ್ಲಿದ್ದಂತೇ ಭಾರತದಲ್ಲೂ ಪಿತ್ರಾರ್ಜಿತ ಆಸ್ತಿಗೆ ಸರ್ಕಾರ ಅರ್ಧದಷ್ಟು ಟ್ಯಾಕ್ಸ್ ಹಾಕಿ ಬಡವರಿಗೆ ನೀಡಬೇಕು ಎಂದಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ನಟ ಚೇತನ್ ಅಹಿಂಸಾ ಶ್ರೀಮಂತರ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಂಡು ಬಡವರಿಗೆ ಹಂಚುವ ಕೆಲಸ ಮಾಡಬೇಕು ಎಂದಿದ್ದಾರೆ.

ಚಿಕ್ಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಚೇತನ್ ಅಹಿಂಸಾ ಸರ್ಕಾರ ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡಿರುವುದರ ವಿರುದ್ಧ ಕಿಡಿ ಕಾರಿದರು. ಮೊದಲು ಅಲೆಮಾರಿ ಜನಾಂಗದವರಿಗೆ ಸೂರು ಕಲ್ಪಿಸುವ ಕೆಲಸ ಮಾಡಲಿ.

ತಾನು ಅಹಿಂದ ಪರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಅಹಿಂದ ಪರ ಕೆಲಸ ಮಾಡುತ್ತಿಲ್ಲ. ಅಹಿಂದ ಪರ ಕೆಲಸ ಮಾಡದೇ ಸೋಮಾರಿಯಾಗಿದ್ದಾರೆ. ಸರ್ಕಾರ ಮೊದಲು ಜಾತಿಗಣತಿ ಮಾಡಿ ಶ್ರೀಮಂತರ ಆಸ್ತಿಯನ್ನು ಬಡವರಿಗೆ ಹಂಚುವ ಕೆಲಸ ಮಾಡಬೇಕು ಎಂದಿದ್ದಾರೆ.

ಅವರ ಈ ಹೇಳಿಕೆ ನೆಟ್ಟಿಗರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಹಾಗಿದ್ದರೆ ಮೊದಲು ನಿಮ್ಮ ಆಸ್ತಿಯನ್ನು ಬಡವರಿಗೆ ಪಾಲು ಹಂಚಿ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಕಾಂಗ್ರೆಸ್ ಕೂಡಾ ತನ್ನ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಈ ವಿಚಾರ ಸೂಚಿಸಿರುವುದು ವಿರೋಧಕ್ಕೆ ಕಾರಣವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments