Webdunia - Bharat's app for daily news and videos

Install App

ಶಾಲೆಗಳಲ್ಲಿ ಪ್ರಾರ್ಥನೆ ಬೇಕಾಗಿಲ್ಲ: ಚೇತನ್ ಅಹಿಂಸಾ

Krishnaveni K
ಮಂಗಳವಾರ, 20 ಫೆಬ್ರವರಿ 2024 (09:42 IST)
Photo Courtesy: facebook
ಬೆಂಗಳೂರು: ಶಾಲೆಗಳಲ್ಲಿ ಪ್ರಾರ್ಥನೆ ಮಾಡಬೇಕಾಗಿಲ್ಲ, ಮೂಢನಂಬಿಕೆಗಳೇನಿದ್ದರೂ ನಿಮ್ಮ ಮನೆಯಲ್ಲಿಟ್ಟುಕೊಳ‍್ಳಿ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.

ನಿನ್ನೆಯಷ್ಟೇ ಸಮಾಜ ಕಲ್ಯಾಣ ಇಲಾಖೆ ವಸತಿಶಾಲೆಗಳ ಗೋಡೆ ಮೇಲೆ ಇಷ್ಟು ವರ್ಷ ಇದ್ದ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ ಎನ್ನುವ ಕುವೆಂಪು ವಾಕ್ಯವನ್ನು ಬದಲಾಯಿಸಿ ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ ಎಂದು ಬದಲಾಯಿಸಿ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಚೇತನ್ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಚೇತನ್, ಇದೀಗ ಶಾಲೆಗಳಲ್ಲಿ ದೇವರ ಪೂಜೆ ಬೇಡ ಎಂಬ ಹೇಳಿಕೆ ನೀಡಿದ್ದಾರೆ. ಶಾಲೆಗಳಲ್ಲಿ ದೇವರ ಪೂಜೆ ಬೇಕಾಗಿಲ್ಲ. ಪೂಜೆ ಪುನಸ್ಕಾರವೆಂಬ ಮೌಢ್ಯಗಳನ್ನು ನಿಮ್ಮ ಮನೆಯಲ್ಲಿಟ್ಟುಕೊಳ್ಳಿ. ಶಾಲೆಗಳಲ್ಲಿ ಮುಖ್ಯವಾಗಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವೈಜ್ಞಾನಿಕತೆಯಿಂದಲೇ ಸತ್ಯ,  ವೈಜ್ಞಾನಿಕವೇ ಸತ್ಯ ಎಂದು ಹೇಳಿದ್ದಾರೆ.

ಚೇತನ್ ಹೇಳಿಕೆ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಕುವೆಂಪು ವಾಕ್ಯ ಬದಲಾವಣೆಗೆ ವಿರೋಧ ವ್ಯಕ್ತಪಡಿಸುತ್ತಿರುವವರಿಗೆ ಪರೋಕ್ಷವಾಗಿ ಟಾಂಗ್ ನೀಡಿರುವ ಚೇತನ್ ಈ ರೀತಿ ಹೇಳಿಕೆ ನೀಡಿದ್ದಾರೆ. ಒಂದೆಡೆ ಕುವೆಂಪು ವಾಕ್ಯ ಬದಲಾವಣೆ ವಿರೋಧಿಸಿ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ತೀವ್ರ ವಾಗ್ದಾಳಿ ನಡೆಸಿದೆ. ಆದರೆ ಕುವೆಂಪು ವಾಕ್ಯವನ್ನು ನಾವು ಬದಲಿಸಿಲ್ಲ ಎಂದು ಸರ್ಕಾರ ಸಮರ್ಥಿಸಿದೆ. ಯಾರೋ ಒಬ್ಬರು ಅಧಿಕಾರಿಗಳು ಮಾಡಿದ ಮೌಖಿಕ ಆದೇಶದ ಪ್ರಕಾರ ಈ ರೀತಿ ಬದಲಾಯಿಸಲಾಗಿತ್ತು ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments