Webdunia - Bharat's app for daily news and videos

Install App

ಪುಟ್ಟರಾಜು, ಸುರೇಶ್ ಗೌಡಗೆ ಟಾಂಗ್ ನೀಡಿದ ಚೆಲುವರಾಯಸ್ವಾಮಿ

Webdunia
ಶುಕ್ರವಾರ, 10 ಮೇ 2019 (18:01 IST)
ಸಿದ್ದರಾಮಯ್ಯ ರಾಷ್ಟ್ರ ಮಟ್ಟದ ನಾಯಕರು. ಅವರು ರಾಜ್ಯಮಟ್ಟದ ನಾಯಕರಲ್ಲ. ರಾಜ್ಯದ ಬೆರಳೆಣಿಕೆ ನಾಯಕರಲ್ಲಿ ಸಿದ್ದರಾಮಯ್ಯ ಒಬ್ಬರು. ನನ್ನ ಮೂಲಕ ಅವರಿಗೆ ರಾಜಕಾರಣ ಮಾಡೋ ಅವಶ್ಯಕತೆ ಇಲ್ಲ ಅಂತ ಚೆಲುವರಾಯಸ್ವಾಮಿ ಹೇಳಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ನಾಯಕನಾಗೋ ಗುಣ ಸಿದ್ದರಾಮಯ್ಯ ಅವರಿಗಿದೆ ಅಂತ ಮಾಜಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ. ಪುಟ್ಟರಾಜು ವ್ಯಂಗ್ಯದ ಬಗ್ಗೆ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ನಮ್ಮನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತ ನಾನು ಹೇಳಿಲ್ಲ. ಅದರ ಅವಶ್ಯಕತೆಯೂ ಇಲ್ಲ. ನಾನೇನು ಶಾಸಕನೇ? ವಿಶ್ವಾಸಕ್ಕೆ ತೆಗೆದುಕೊಳ್ಳೋಕೆ? ಈಗ 120 ರಿಂದ 117 ಸೀಟಿಗೆ ಇಳಿದಿದೆ. ಹಾಗಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದಿದ್ದೆ ಎಂದು ಸಚಿವ ಪುಟ್ಟರಾಜುಗೆ ಟಾಂಗ್ ನೀಡಿದ್ರು.

ಇನ್ನು ಸುರೇಶ್ ಗೌಡ ಹೇಳಿಕೆಗೆ ಚೆಲುವರಾಯಸ್ವಾಮಿ ಟಾಂಗ್ ನೀಡಿದ್ದು, ಸುರೇಶ್ ಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ನಾನು ಎಂದೂ ಅವರ ಬಗ್ಗೆ ಮಾತನಾಡಿಲ್ಲ. ಅವರ ಹೇಳಿಕೆಗಳಿಂದ ನನಗೇನು ಮುಜುಗರವೂ ಇಲ್ಲ. 25 ವರ್ಷದಿಂದ ರಾಜಕಾರಣ ಮಾಡುತ್ತಿದ್ದೇನೆ. ವ್ಯಭಿಚಾರ ಪದ ಬಳಕೆಯಿಂದ ಆಶ್ಚರ್ಯವಾಗಲಿ ಇಲ್ಲ. ಏನೂ ವಿಶೇಷವೂ ಕಂಡು ಬಂದಿಲ್ಲ.

1984 ರಿಂದಲೂ ನಾನು ಟೆಂಪ್ಟ್ ಆದವನಲ್ಲ. ಸುರೇಶ್ ಗೌಡರಿಗೆ ಒಳ್ಳೆಯದಾಗಲಿ. ಸುರೇಶ್ ಗೌಡ ಯಾವ ನಾಯಕ ಎಂದು ಪರೋಕ್ಷ ವಾಗ್ದಾಳಿ ನಡೆಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments