Chhattisgarh Naxal Encounter: ಐವರು ನಕ್ಸಲರ ಹತ್ಯೆ

Sampriya
ಶನಿವಾರ, 7 ಜೂನ್ 2025 (17:38 IST)
Photo Courtesy X
ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಎನ್‌ಕೌಂಟರ್‌ಗಳಲ್ಲಿ ಐವರು ನಕ್ಸಲರು ಸಾವನ್ನಪ್ಪಿದ್ದಾರೆ.

ಈ ಎನ್‌ಕೌಂಟರ್‌ನಲ್ಲಿ ನಕ್ಸಲ್‌ ಸಂಘಟನೆಯ ಉನ್ನತ ನಾಯಕರಾದ ತೆಲಂಗಾಣ ರಾಜ್ಯ ಸಮಿತಿಯ ವಿಶೇಷ ವಲಯ ಸಮಿತಿ ಸದಸ್ಯ ಭಾಸ್ಕರ್‌ ಹಾಗೂ ಮಾವೋವಾದಿಗಳ ಕೇಂದ್ರ ಸಮಿತಿ ಸದಸ್ಯ ನರಸಿಂಹ ಚಲಂ ಅಲಿಯಾಸ್‌ ಸುಧಾಕರ್‌ ಹತ್ಯೆಯಾಗಿದ್ದಾರೆ ಎಂದು ತಿಳಿದುಬಂದಿದೆ. 

ಭಾಸ್ಕರ್‌ ಸುಳಿವು ನೀಡಿದವರಿಗೆ ₹45 ಲಕ್ಷ ಬಹುಮಾನವನ್ನು ಛತ್ತೀಸಗಢ ಹಾಗೂ ತೆಲಂಗಾಣದಲ್ಲಿ ಘೋಷಿಸಲಾಗಿತ್ತು. ಚಲಂ ಸುಳಿವು ನೀಡಿದವರಿಗೆ ಛತ್ತೀಸಗಢ ಸರ್ಕಾರ ₹40 ಲಕ್ಷ ಬಹುಮಾನವನ್ನು ಘೋಷಿಸಿತ್ತು.

ಜೂನ್‌ 4ರಿಂದ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆದಿದೆ. ಎರಡು ಎಕೆ–47 ರೈಫಲ್‌ಗಳು ಸೇರಿದಂತೆ ಅಪಾರ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೃತಪಟ್ಟ ನಕ್ಸಲರಲ್ಲಿ ಇಬ್ಬರು ಮಹಿಳೆಯರ ಶವ ದೊರೆತಿದ್ದು, ಅವರ ಗುರುತು ಪತ್ತೆಯಾಗಿಲ್ಲ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments