Webdunia - Bharat's app for daily news and videos

Install App

Chhattisgarh Naxal Encounter: ಐವರು ನಕ್ಸಲರ ಹತ್ಯೆ

Sampriya
ಶನಿವಾರ, 7 ಜೂನ್ 2025 (17:38 IST)
Photo Courtesy X
ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಎನ್‌ಕೌಂಟರ್‌ಗಳಲ್ಲಿ ಐವರು ನಕ್ಸಲರು ಸಾವನ್ನಪ್ಪಿದ್ದಾರೆ.

ಈ ಎನ್‌ಕೌಂಟರ್‌ನಲ್ಲಿ ನಕ್ಸಲ್‌ ಸಂಘಟನೆಯ ಉನ್ನತ ನಾಯಕರಾದ ತೆಲಂಗಾಣ ರಾಜ್ಯ ಸಮಿತಿಯ ವಿಶೇಷ ವಲಯ ಸಮಿತಿ ಸದಸ್ಯ ಭಾಸ್ಕರ್‌ ಹಾಗೂ ಮಾವೋವಾದಿಗಳ ಕೇಂದ್ರ ಸಮಿತಿ ಸದಸ್ಯ ನರಸಿಂಹ ಚಲಂ ಅಲಿಯಾಸ್‌ ಸುಧಾಕರ್‌ ಹತ್ಯೆಯಾಗಿದ್ದಾರೆ ಎಂದು ತಿಳಿದುಬಂದಿದೆ. 

ಭಾಸ್ಕರ್‌ ಸುಳಿವು ನೀಡಿದವರಿಗೆ ₹45 ಲಕ್ಷ ಬಹುಮಾನವನ್ನು ಛತ್ತೀಸಗಢ ಹಾಗೂ ತೆಲಂಗಾಣದಲ್ಲಿ ಘೋಷಿಸಲಾಗಿತ್ತು. ಚಲಂ ಸುಳಿವು ನೀಡಿದವರಿಗೆ ಛತ್ತೀಸಗಢ ಸರ್ಕಾರ ₹40 ಲಕ್ಷ ಬಹುಮಾನವನ್ನು ಘೋಷಿಸಿತ್ತು.

ಜೂನ್‌ 4ರಿಂದ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಕಾರ್ಯಾಚರಣೆ ನಡೆದಿದೆ. ಎರಡು ಎಕೆ–47 ರೈಫಲ್‌ಗಳು ಸೇರಿದಂತೆ ಅಪಾರ ಮದ್ದುಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೃತಪಟ್ಟ ನಕ್ಸಲರಲ್ಲಿ ಇಬ್ಬರು ಮಹಿಳೆಯರ ಶವ ದೊರೆತಿದ್ದು, ಅವರ ಗುರುತು ಪತ್ತೆಯಾಗಿಲ್ಲ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

Bengaluru: ಅನೈತಿಕ ಸಂಬಂಧ ಶಂಕೆ, ಪತ್ನಿಯ ತಲೆ ಕತ್ತರಿಸಿ, ಠಾಣೆಗೆ ಕೊಂಡೊಯ್ದ ಪತಿ

Chenab Railway Bridge: ವಿಶ್ವದ ಅತೀ ಎತ್ತರದ ಸೇತುವೆಯ ನಿಮಾರ್ಣದ ಹಿಂದಿದೆ ಬೆಂಗಳೂರು ಟೆಕ್ಕಿಯ ಕೈಚಳಕ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments