Webdunia - Bharat's app for daily news and videos

Install App

ಷಷ್ಠಿಗೆ ಕೋಳಿ ಬಲಿ: ಯಾಕೆ ಗೊತ್ತಾ?

Webdunia
ಶುಕ್ರವಾರ, 14 ಡಿಸೆಂಬರ್ 2018 (18:19 IST)
ಷಷ್ಠಿ ಬಂದರೆ ಹಾಲು, ಬೆಣ್ಣೆ, ಪಂಚಾಮೃತ  ಹುತ್ತಕ್ಕೆ ಎರೆಯುವುದು ಸಾಮಾನ್ಯ. ಆದರೆ  ಈ ಗ್ರಾಮದಲ್ಲಿ ಕೋಳಿಯ ರಕ್ತ  ಹಾಗೂ ಮೊಟ್ಟೆ ಎರೆಯುವ  ಮೂಲಕ ಷಷ್ಠಿ ಆಚರಿಸಲಾಯಿತು.

 ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಹುತ್ತಕ್ಕೆ ಕೋಳಿ ಬಲಿ ಕೊಡುವುದರ ಮೂಲಕ  ನಾಗಪ್ಪನಿಗೆ ನಮಿಸಿ, ತಮ್ಮ ಇಷ್ಟಾರ್ಥ ಈಡೇರಿಸಿಕೊಳ್ಳಲಾಯಿತು.
ಈ ಭಾಗದ ಗ್ರಾಮಸ್ಥರು ಬಹುತೇಕ ಕೃಷಿ ಚಟುವಟಿಕೆಯನ್ನೇ ನಂಬಿರುವುದರಿಂದ  ಸರ್ಪಗಳು ತಮಗೆ ತೊಂದರೆ ಕೊಡದಿರಲೆಂದು ಕೋಳಿ ಬಲಿ ಕೊಟ್ಟು, ಮೊಟ್ಟೆಯನ್ನು ನಾಗಪ್ಪನಿಗೆ ಸಮರ್ಪಿಸಿದರು.

ಇನ್ನೂ ಈ ರೀತಿ ಕೋಳಿ ಬಲಿಕೊಟ್ಟರೇ ಸರ್ಪ ಸಂಬಂಧದ ತೊಂದರೆ ಕಾಣುವುದಿಲ್ಲ ಜೊತೆಗೆ ತಮ್ಮ ಇಷ್ಟಾರ್ಥವೂ ಒಂದು ವರ್ಷದೊಳಗೆ ಈಡೇರಲಿದೆ ಎಂಬುದು ಈ ಗ್ರಾಮದಲ್ಲಿ ತಲ ತಲಾಂತರದಿಂದ ಬಂದ ನಂಬಿಕೆಯಾಗಿದೆ.

ನಾಗಪ್ಪನಿಗೆ ಕೋಳಿ ಬಲಿ ಎಂಬುದು ವಿಲಕ್ಷಣವಾಗಿ ಕಂಡರೂ, ಭಯ-ಭಕ್ತಿ ಹಾಗೂ ನಂಬಿಕೆಯಿಂದ ಗ್ರಾಮಸ್ಥರು ಷಷ್ಠಿಯನ್ನು ಆಚರಿಸಿಕೊಂಡು ಬರುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments