Webdunia - Bharat's app for daily news and videos

Install App

ರಾಜ್ಯದಲ್ಲಿ ಎಸೆತ್ತಿರುವ ಕೇರಳದ ಕೋಳಿ ತ್ಯಾಜ್ಯ?

Webdunia
ಶುಕ್ರವಾರ, 13 ಜುಲೈ 2018 (12:24 IST)
ಕೇರಳ ರಾಜ್ಯದಿಂದ ಲಾರಿಯಲ್ಲಿ ತಂದು ಕೋಳಿ ತಾಜ್ಯ ಎಸೆಯುತ್ತಿರುವ  ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಇದರಿಂದ ಹಲವು ಅನುಮಾನಗಳು ಜನರನ್ನು ಕಾಡಲಾರಂಭಿಸಿದೆ. ಪದೇ ಪದೇ ಕೋಳಿ ತ್ಯಾಜ್ಯವನ್ನು ಲಾರಿಗಟ್ಟಲೇ ತಂದು ಎಲ್ಲೆಂದರಲ್ಲಿ ಎಸೆದು ಹೋಗುತ್ತಿರುವುದರಿಂದ ರೋಸಿ ಹೋಗಿರುವ ಸ್ಥಳೀಯರು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ರೆಂಜ  ಎಂಬಲ್ಲಿ ಲಾರಿ ಯೊಂದರಲ್ಲಿ  ತುಂಬಿಸಿ  ತಂದಿದ್ದ  ಕೋಳಿ  ತಾಜ್ಯವನ್ನು ಅಪರಿಚಿತ  ವ್ಯಕ್ತಿಗಳು ರಸ್ತೆ ಬದಿ ಎಸೆದು ಹೋಗಿದ್ದು  ನಾಗರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವುದರಿಂದ ಈ ರೀತಿ ಕೋಳಿ ತಾಜ್ಯಗಳನ್ನು  ರಸ್ತೆ ಬದಿ ಎಸೆದು ಹೋಗುವುದರಿಂದ  ಸಾಂಕ್ರಾಮಿಕ  ರೋಗಗಳು  ಹರಡುವ  ಭೇಟಿ ಉಂಟಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಇದೇ ರೀತಿ ಅರ್ಲಪದವು  ಪಾಣಾಜೆ,  ಬೆಟ್ಟಂಪಾಡಿ,  ಬೇಂದ್ರ ತೀರ್ಥ ಮುಂತಾದ ಕಡೆಗಳಲ್ಲಿ ರಾತ್ರಿ ವೇಳೆ ಬಂದು ಲಾರಿ ಯಲ್ಲಿ ಕೋಳಿ ತಾಜ್ಯ  ತಂದು ಎಸೆಯಲಾಗುತ್ತಿದ್ದು,  ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಸ್ಥಳೀಯರು ಪುತ್ತೂರು ಗ್ರಾಮಾಂತರ  ಠಾಣೆಗೆ  ದೂರು ನೀಡಿದ್ದಾರೆ. ಇಂದು ಮತ್ತೆ ಲಾರಿ ಯಲ್ಲಿ  ಕೋಳಿ ತಾಜ್ಯ ತಂದು ರೆಂಜದಲ್ಲಿ ಎಸೆಯಲಾಗಿದ್ದು , ಸ್ಥಳೀಯರು ಅವರನ್ನು ತರಾಟೆಗೆ  ತೆಗೆದು ಕೊಂಡಿದ್ದಾರೆ. ಅಲ್ಲದೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಕೇರಳ ರಾಜ್ಯದಿಂದ ಲಾರಿ ಯಲ್ಲಿ ತಂದು ಕೋಳಿ ತಾಜ್ಯ ಎಸೆಯುತ್ತಿರುವ  ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

India's Project Cheetah: Botswanaನಿಂದ ಮುಂದಿನ ತಿಂಗಳೇ ಬರಲಿದೆ ನಾಲ್ಕು ಚೀತಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

ಮುಂದಿನ ಸುದ್ದಿ
Show comments