Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯಗೆ ದುರಹಂಕಾರ ಬಂದಿದೆ: ಕುಮಾರಸ್ವಾಮಿ ಕಿಡಿ

Webdunia
ಗುರುವಾರ, 17 ಆಗಸ್ಟ್ 2017 (15:30 IST)
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದುರಹಂಕಾರ ಬಂದಿದೆ. ಹಣಬಲದಿಂದ ಮುಂಬರುವ ಚುನಾವಣೆ ಗೆಲ್ಲುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ಮಾಜಿ ಸಿಎಂ, ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡು, ಗುಂಡ್ಲುಪೇಟೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದವರು 100 ಕೋಟಿ ಖರ್ಚುಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
 
ನನ್ನನ್ನು ಬಹಳ ಮೃದು ಸ್ವಭಾವದವರು ಎಂದು ತಿಳಿದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಸ್ವೇಚ್ಚಾಚಾರ, ಹಣ ಲೂಟಿ ವಿರುದ್ಧ ಮೃದು ಧೋರಣೆ ತಾಳುವುದಿಲ್ಲ. ಸರಕಾರದ ವಿರುದ್ಧ ಹೋರಾಟ ಖಚಿತ ಎಂದು ತಿಳಿಸಿದ್ದಾರೆ.
 
ಬೆಂಗಳೂರು ಅಭಿವೃದ್ಧಿ ಮಾಡಿದ್ದೇವೆ ಎಂದು ಪುಟಗಟ್ಟಲೆ ಜಾಹೀರಾತು ನೀಡಿದ್ದಾರೆ. ಆದರೆ, ಯಾವುದೇ ರೀತಿಯಲ್ಲೂ ಬೆಂಗಳೂರು ಅಭಿವೃದ್ಧಿಯಾಗಿಲ್ಲ. ಕೇವಲ ಜಾಹೀರಾತಿನಲ್ಲಿ ಮಾತ್ರ ಅಭಿವೃದ್ಧಿಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments