Webdunia - Bharat's app for daily news and videos

Install App

ಸಾಲ ವಸೂಲಿ ಮಾಡದಂತೆ ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Webdunia
ಭಾನುವಾರ, 2 ಏಪ್ರಿಲ್ 2017 (17:31 IST)
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರಿಂದ ಸಾಲ ವಸೂಲಾತಿ ಮಾಡದಂತೆ ಬ್ಯಾಂಕ್‌ಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
 
ಹುಬ್ಬಳ್ಳಿಯಲ್ಲಿ ರೈತರಿಗೆ ಸಾಲ ಮರುಪಾವತಿಸುವಂತೆ ಬ್ಯಾಂಕ್‌‌ಗಳು ನೋಟಿಸ್ ನೀಡಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
 
ರಾಜ್ಯದಲ್ಲಿರುವ ಸಹಕಾರಿ ಬ್ಯಾಂಕ್‌ಗಳು ಯಾವುದೇ ಕಾರಣಕ್ಕೂ ಬಲವಂತವಾಗಿ ರೈತರ ಸಾಲ ವಸೂಲಾತಿ ಮಾಡಬಾರದು. ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲ ವಸೂಲಾತಿ ಮಾಡಬಾರದು ಎಂದು ಕಟ್ಟಾಜ್ಞೆ ಹೊರಡಿಸಿದ್ದಾರೆ.
 
ಶೀಘ್ರದಲ್ಲಿಯೇ ಕೇಂದ್ರ ವಿತ್ತಖಾತೆ ಸಚಿವ ಅರುಣ್ ಜೇಟ್ಲಿಯವರೊಂದಿಗೆ ಮಾತುಕತೆ ನಡೆಸಲಿದ್ದು ಸಾಲ ಮನ್ನಾ ಕುರಿತಂತೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
 
ಕೇಂದ್ರ ಸರಕಾರ ರೈತರ ಅರ್ಧ ಸಾಲವನ್ನು ಮನ್ನಾ ಮಾಡಿದಲ್ಲಿ ರಾಜ್ಯ ಸರಕಾರ ಕೂಡಾ ಇನ್ನರ್ಧ ಸಾಲವನ್ನು ಮನ್ನಾ ಮಾಡಲಿದೆ. ಯಾವುದೇ ಅನುಮಾನ ಬೇಡ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments