Webdunia - Bharat's app for daily news and videos

Install App

ಬರದ ಬರೆ: ಇಂದು ಪ್ರಧಾನಿ- ಸಿಎಂ ಭೇಟಿ

Webdunia
ಶನಿವಾರ, 7 ಮೇ 2016 (12:29 IST)
ಭೀಕರ ಬರದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ನವದೆಹಲಿಯಲ್ಲಿ ಶನಿವಾರ ಕರೆದಿದ್ದಾರೆ.
 
ಒನ್ ಟು ಒನ್ ಸಭೆ ಇದಾಗಿದ್ದು ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಪ್ರತ್ಯೇಕವಾಗಿ ಭೇಟಿಯಾಗಲಿರುವ ಮೋದಿ ಕೃಷಿ– ಕುಡಿಯುವ ನೀರಿನ ಸಮಸ್ಯೆ, ಮೇವಿನ ಅಭಾವ ಕುರಿತು ಸಮಗ್ರ ಮಾಹಿತಿ ಪಡೆಯಲಿದ್ದಾರೆಂದು ಮೂಲಗಳು ತಿಳಿಸಿವೆ. ಪ್ರಧಾನಿ ಮಂತ್ರಿಗಳ ಜೊತೆಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. 
 
ರಾಜ್ಯದಲ್ಲಿ ಆವರಿಸಿರುವ ಭೀಕರ ಬರಗಾಲದ ಬಗ್ಗೆ ಮೋದಿಯವರಿಗೆ ಮಾಹಿತಿ ನೀಡಿ ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡುವುದಾಗಿ ಜತೆಗೆ ಕಳಸಾ ಬಂಡೂರಿ ಯೋಜನೆ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ನಿನ್ನೆ ತಿಳಿಸಿದ್ದರು.
 
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳು ಪ್ರಸ್ತುತ ವರ್ಷ ಭೀಕರ ಬರಕ್ಕೆ ತುತ್ತಾಗಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗಿತಿಗಳನ್ನು ಪರಿಶೀಲಿಸಿದ್ದರು. ಜಿಲ್ಲಾಡಳಿತದೊಡನೆ ಸಭೆ ನಡೆಸಿ ಮುಂಗಾರು ಆರಂಭವಾಗುವವರೆಗೆ ಬರ ಕಾಮಗಾರಿ ನಿರಂತರವಾಗಿರಲಿ ಎಂದು ಆದೇಶಿಸಿದ್ದರು. ಜತೆಗೆ ಕೇಂದ್ರದಿಂದಲೂ ಕೂಡ ಹೆಚ್ಚಿನ ಬರ ಪರಿಹಾರ ಕೇಳುವುದಾಗಿ ತಿಳಿಸಿದ್ದರು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments