ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಕಪ್ಪ ಕೊಡುವ ವಿಚಾರ ಕುರಿತಂತೆ ಡೈರಿಯಲ್ಲಿರುವ ಮಾಹಿತಿ ಬಹಿರಂಗವಾದ ನಂತರ ಸಿಎಂ ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದಾರೆ. ಇಂದೂ ಕೂಡಾ ಅವರು ಮೌನವ್ರತ ಮುಂದುವರಿಸಿ ಯಾರನ್ನೂ ಭೇಟಿಯಾಗಲೂ ನಿರಾಕರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸವಾದ ಕಾವೇರಿಯಲ್ಲಿದ್ದಾರೆ. ಸಿದ್ದರಾಮಯ್ಯ ತಮ್ಮ ಆಪ್ತರನ್ನು ಕೂಡಾ ಭೇಟಿಯಾಗಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಮರಿಗೌಡ ಸಿಎಂ ನಿವಾಸಕ್ಕೆ ಆಗಮಿಸಿದ್ದರೂ ಸಿಎಂ ಭೇಟಿಗೆ ಅವಕಾಶ ದೊರೆಯದೆ ಬಂದ ದಾರಿಗೆ ಸುಂಕವಿಲ್ಲವೆನ್ನುವಂತೆ ಮರಳಿದ್ದಾರೆ.
ವಿಧಾನಪರಿಷತ್ ಸದಸ್ಯ ಗೋವಿಂದರಾಜು ನಿವಾಸದಲ್ಲಿ ದೊರೆತಿರುವ ಡೈರಿಯಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಒಂದು ಸಾವಿರ ಕೋಟಿ ರೂಪಾಯಿ ಕಪ್ಪ ಸಲ್ಲಿಸಲಾಗಿದೆ ಎನ್ನುವ ವಿವರಗಳಿವೆ ಎಂದು ವಿಪಕ್ಷವಾದ ಬಿಜೆಪಿ ಕೋಲಾಹಲ ಸೃಷ್ಟಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.