Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ
ಬೆಂಗಳೂರು , ಬುಧವಾರ, 26 ಆಗಸ್ಟ್ 2015 (16:41 IST)
ಕಳಸಾ ಬಂಡೂರಿ ಯೋಜನೆ ಜಾರಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
 
ಕಳಸಾ ಬಂಡೂರಿ ಹೋರಾಟ ತೀವ್ರತೆರನಾದ ಸ್ವರೂಪ ಪಡೆಯುತ್ತಿದ್ದು ಕೂಡಲೇ ಪ್ರಧಾನಿ ಮಧ್ಯಪ್ರವೇಶಿಸಿ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಗಳಿವೆ ಎಂದು ಎಚ್ಚರಿಸಿದ್ದಾರೆ.
 
ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುವುದಿಲ್ಲ. ಯೋಜನೆಯನ್ನು ಶೀಘ್ರ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ಚಿಂತನೆ ನಡೆಸಬೇಕಾಗಿದೆ ಎಂದು ಹೇಳಿದ್ದಾರೆ.
 
ಅಗತ್ಯವಾದಲ್ಲಿ ಮತ್ತೊಮ್ಮೆ  ಮೋದಿ ಬಳಿಗೆ ಸರ್ವಪಕ್ಷಗಳ ನಿಯೋಗ ತೆಗೆದುಕೊಂಡು ಹೋಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
 

Share this Story:

Follow Webdunia kannada