Webdunia - Bharat's app for daily news and videos

Install App

ಹೊರಮಾವು ವಾರ್ಡ್ ನ ಮಳೆ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ವೀಕ್ಷಣೆ

Webdunia
ಬುಧವಾರ, 24 ನವೆಂಬರ್ 2021 (21:19 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊರಮಾವು ವಾರ್ಡ್ ನ ಬಿ.ಡಿ.ಎಸ್ ನಗರದ ಮಳೆ ಹಾನಿ ಪ್ರದೇಶಗಳಿಗೆ  ಭೇಟಿ ನೀಡಿ ಪರಿಶೀಲಿಸಿದರು. 
 
 ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಹ ನೀರಿನ ಸಮಸ್ಯೆ ಆಗಿಂದಾಗ್ಗೆ ಆಗುತ್ತಿದೆ.  ಸಚಿವ ಬಸವರಾಜ ಬೈರತಿಯವರು  ಮಳೆನೀರಿನಿಂದಾಗಿರುವ ಸಮಸ್ಯೆಗಳಿಗೆ  ಉತ್ತಮ ರೀತಿಯಲ್ಲಿ ಜನರಿಗೆ ಪರಿಹಾರ ಕೊಟ್ಟಿದ್ದಾರೆ ಎಂದು ತಿಳಿಸಿದರು.
 
ಯಲಹಂಕ ಮತ್ತು ಹೆಬ್ಬಾಳ ವ್ಯಾಲಿಯಿಂದ ಮಳೆನೀರು ಕೆ.ಆರ್.ಪುರಂ, ಮಹದೇವಪುರದ ಮೂಲಕ ಹೋಗುತ್ತದೆ.  ರೈಲ್ವೆ ಬ್ಲಾಕೇಡ್ ನಿಂದ ಸುತ್ತಮುತ್ತಲಿನ ಬಡಾವಣೆಗಳಿಗೆ ನೀರು ನುಗ್ಗುತ್ತಿದೆ. ಹೆಬ್ಬಾಳ ವ್ಯಾಲಿ ನೀರು 125 ಅಡಿ ಅಗಲ ಇರುವ ಚರಂಡಿಯಿಂದ ಬರುತ್ತಿದೆ. ಅದನ್ನು ಸರಿಯಾಗಿ ನಿರ್ವಹಿಸಲಾಗುತ್ತಿದೆ. ಆದರೆ ರೈಲ್ವೆ ವೆಂಟ್ ಬಹಳ ಚಿಕ್ಕದಿರುವುದರಿಂದ ದೊಡ್ಡ ಪ್ರಮಾಣದಲ್ಲಿ ನೀರು ಹರಿದುಬಂದಾಗ 10-12 ಅಡಿ ನೀರು ಹೊರಗೆ ಹರಿಯುತ್ತಿದೆ. ಅದಕ್ಕಾಗಿ ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳೊಂದಿಗೆ ಇಂದೇ ಮಾತನಾಡಿ , ಇದಕ್ಕೆ ಬೇಕಾದ ಹಣಕಾಸಿನ ವ್ಯವಸ್ಥೆಯನ್ನೂ ಮಾಡಿ ರೈಲ್ವೆ ವೆಂಟ್ ನ್ನು ವಿಸ್ತರಿಸಿ  ಸಂಪೂರ್ಣವಾಗಿ ನೀರು ಹೋಗಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
 
ಅರ್ಕಾವತಿ ಲೇಔಟ್ ಬಳಿ ಬಿಡಿಎ ವತಿಯಿಂದ ಇನ್ನೊಂದು  ರೈಲ್ವೇ ವೆಂಟ್ ನ್ನು  ಮಾಡಲಾಗುತ್ತಿದ್ದು, ಬಿಡಿಎ ದವರು ಮಾಡಲು ಸೂಚಿಸಲಾಗಿದೆ. ಅದಕ್ಕೆ ಮುಂದುವರಿದ ಆರ್ ಸಿಸಿ ಲೈನಿಂಗ್ ನ ಚರಂಡಿ ವ್ಯವಸ್ಥೆಯನ್ನೂ ಕಲ್ಕೆರೆಗೆ ಮುಟ್ಟಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು . ನಾಗೇನಹಳ್ಳಿ ಕೆರೆಯಿಂದ ಬರುವ  ಮುಖ್ಯ ಡ್ರೈನ್ ನ್ನು ಅಗಲೀಕರಣಗೊಳಿಸಿ 3.5 ಕಿ.ಮೀ ವರೆಗೆ ನಿರ್ಮಿಸಿ  ಹೆಬ್ಬಾಳ ವ್ಯಾಲಿಗೆ ಸೇರಿಸುವ ಕಾಮಗಾರಿಯನ್ನು ಸಧ್ಯದಲ್ಲಿಯೇ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments