Webdunia - Bharat's app for daily news and videos

Install App

ಚಿಕ್ಕಮಾದು ಅವರ ಪುತ್ರ ಅನಿಲ್ ಚಿಕ್ಕಮಾದು ಚಿತ್ತ ಕಾಂಗ್ರೆಸ್ ನತ್ತ

Webdunia
ಸೋಮವಾರ, 5 ಫೆಬ್ರವರಿ 2018 (11:11 IST)
ಮೈಸೂರು : ಜೆಡಿಎಸ್ ಶಾಸಕರಾಗಿದ್ದ ದಿವಂಗತ ಚಿಕ್ಕಮಾದು ಅವರ ಕುಟುಂಬವನ್ನು ಕಾಂಗ್ರೆಸ್‍ ನತ್ತ ಎಳೆದುಕೊಳ್ಳುವಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯಶಸ್ವಿಯಾಗಿದ್ದು, ಇದರಿಂದಾಗಿ ತವರು ನಾಡಾದ ಮೈಸೂರು ಭಾಗದಲ್ಲಿ ಜೆಡಿಎಸ್ ಬಲ ತಗ್ಗಿದಂತಾಗಿದೆ.


ದಿವಂಗತ ಶಾಸಕ ಚಿಕ್ಕಮಾದು ಅವರ ಪುತ್ರ ಜಿಲ್ಲಾ ಪಂಚಾಯತ್ ಸದಸ್ಯ ಅನಿಲ್ ಚಿಕ್ಕಮಾದು, ಸೋಮವಾರ (ಇಂದು) ತಮ್ಮ ಜಿಲ್ಲಾ ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವುದನ್ನು ಅಧಿಕೃತಗೊಳಿಸಿದ್ದಾರೆ. ಎಚ್.ಡಿ ಕೋಟೆ ಪರಿಶಿಷ್ಟ ವರ್ಗದ ಮೀಸಲು ಕ್ಷೇತ್ರದ ಶಾಸಕರಾಗಿದ್ದ ಚಿಕ್ಕಮಾದು ಅಕಾಲಿಕ ಮರಣಕ್ಕೆ ಇಡಾಗಿದ್ದರು. ಇವರ ಮಗ ಅನಿಲ್ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆಗುವ ಇಚ್ಛೆ ಹೊಂದಿದ್ದರು. ಆದರೆ ಅಲ್ಲಿನ ಮಾಜಿ ಶಾಸಕ ಚಿಕ್ಕಣ್ಣ ಇತ್ತೀಚೆಗೆ ಜೆಡಿಎಸ್ ಸೇರ್ಪಡೆಯಾದ ಕಾರಣ ಟಿಕೆಟ್ ಕೈ ತಪ್ಪುವ ಸ್ಥಿತಿ ಇತ್ತು. ಇದನ್ನು ಅರಿತ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಟಿಕೆಟ್ ಭರವಸೆ ನೀಡಿ ಚಿಕ್ಕಮಾದು ಕುಟುಂಬವನ್ನು ಕಾಂಗ್ರೆಸ್‍ಗೆ ಸೆಳೆದಿದ್ದಾರೆ. ಇದರಿಂದ ಜೆಡಿಎಸ್‍ಗೆ ದೊಡ್ಡ ಹಿನ್ನಡೆಯಾದಂತಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments