Webdunia - Bharat's app for daily news and videos

Install App

ಚಿಕ್ಕಮಗಳೂರು ಹಬ್ಬ ಜನರಲ್ಲಿ ಉತ್ಸಾಹ ತುಂಬಲಿದೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಬುಧವಾರ, 18 ಜನವರಿ 2023 (21:03 IST)
ಚಿಕ್ಕಮಗಳೂರು  ವೈವಿಧ್ಯತೆ ಮತ್ತು ನಿಸರ್ಗದಿಂದ ಕೂಡಿರುವ ನಾಡು. ದೊಡ್ಡ ಪ್ರಮಾಣದಲ್ಲಿ ಚಿಕ್ಕಮಗಳೂರು ಹಬ್ಬ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದ್ದು, ಚಿಕ್ಕಮಗಳೂರಿನ ಜನರಲ್ಲಿ ಉತ್ಸಾಹ ತುಂಬುವ  ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಂಗ್ರೆಸ್ ಘೋಷಣೆ ಪ್ರತಿಯಾಗಿ ಪ್ರತಿಯಾಗಿ ಕಂದಾಯ ಸಚಿವರು ಬಿಪಿಎಲ್ ಕುಟುಂಬಕ್ಕೆ 2 ಸಾವಿರ ಕುಟುಂಬಕ್ಕೆ ನೀಡುವ ಯೋಜನೆ ಬಗ್ಗೆ ಪ್ರತಿಕ್ರಿಯೆ ನೀಡಿ, ಗೃಹಿಣಿ ಶಕ್ತಿ ಎಂಬ ಯೋಜನೆ ಎಲ್ಲ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ. ಬಡಕುಟುಂಬಗಳಿಗೆ ದಿನಿನಿತ್ಯದ ವಸ್ತುಗಳ ಖರೀದಿಗೆ  ಸೇರಿದಂತೆ ಜನರ ನೆಮ್ಮದಿಯ ಬದುಕಿಗೆ ಅನುಕೂಲವಾಗುವಂತ ಹಲವು ಯೋಜನೆಗಳನ್ನು ಜಾರಿಗೆ ತರುವ ಚಿಂತನೆ ಇದೆ. ಅಸ್ಸಾಂ ರಾಜ್ಯದಲ್ಲಿಯೇ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಉದ್ದೇಶವಿದೆ ಎಂದು ತಿಳಿಸಿದರು.
ಮೀಸಲಾತಿ ಬಗ್ಗೆ ಅಂತಿಮ ತೀರ್ಮಾನದ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ. ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿಯನ್ನು ಸಚಿವ ಸಂಪುಟದ ಮುಂದೆ ಇಡಲಾಗಿದೆ. ಅಂತಿಮ ವರದಿ ಬಂದ ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ. ಹಿಂದುಳಿದ ವರ್ಗಗಳ ವರ್ಗೀಕರಣ, ಯಾವ ವರ್ಗಕ್ಕೆ ಎಷ್ಟು ಪ್ರಮಾಣ ಇರಬೇಕು ಎಂಬ ಬಗ್ಗೆ ಅಂತಿಮ ವರದಿ ಬಂದ ನಂತರ ಸ್ಪಷ್ಟ ಉತ್ತರ ದೊರೆಯಲಿದೆ ಎಂದರು.
 
ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ರೀತಿಯ ಹೇಳಿಕೆ ಏಕೆ ನೀಡಿದ್ದಾರೋ ಗೊತ್ತಿಲ್ಲ. ಇವರ ಹೇಳಿಕೆ ಬಗ್ಗೆ ಟೀಕೆ ಮಾಡುವುದಿಲ್ಲ.2007 ರಲ್ಲಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಬಂದು, ಈ17 ಜನ ಮಾಡಿದಂತೆಯೇ ಚುನಾವಣೆಯನ್ನು ಎದುರಿಸಿದ್ದರು. ಹರಿಪ್ರಸಾದ್ ಅವರ ಹೇಳಿಕೆ ಈ 17 ಜನ ಶಾಸಕರಿಗೆ ಅನ್ವಯಿಸಿದರೆ, ಖುದ್ದು ಅವರಿಗೂ ಅನ್ವಯಿಸುವುದಿಲ್ಲವೇ ಎಂಬುದನ್ನು ಅವರು ಯೋಚಿಸಬೇಕು ಎಂದರು.
 
ಸ್ವಚ್ಛ ಆಡಳಿತವಿರುವ ಸರ್ಕಾರದ ವಿರುದ್ಧ ಪಕ್ಷದವರೇ ಯತ್ನಾಳ್ ಆರೋಪ ಮಾಡುತ್ತಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರೆಲ್ಲ ಅತ್ಯುತ್ಸಾಹದ ಮಿತ್ರರು. ಪಕ್ಷದ ವರಿಷ್ಟರು ಇವರೊಂದಿಗೆ ಮಾತನಾಡಿ ಬಗೆಹರಿಸಲಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments