Daily Horoscope

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

Sampriya
ಶುಕ್ರವಾರ, 18 ಜುಲೈ 2025 (20:11 IST)
ಚಿಕ್ಕಮಗಳೂರು: ಕ್ವಾಟ್ರಸ್ ನಲ್ಲೆ ಹೆಡ್‌ ಕಾನ್‌ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿ ಶುಕ್ರವಾರ ವರದಿಯಾಗಿದೆ.

ಆತ್ಮಹತ್ಯೆಗೆ ಶರಣಾದವರನ್ನು ಕಾಂತರಾಜ್ (45) ಎಂದು ಗುರುತಿಸಲಾಗಿದೆ.

ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಮೂಲದವರಾದ ಕಾಂತರಾಜ್ ಚಿಕ್ಕಮಗಳೂರು ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. 


ಈ ಹಿಂದೆ ನಡೆದ ಅಪಘಾತದಲ್ಲಿ ಕಾಲು ಕಳೆದುಕೊಂಡ ಅವರಿಗೆ ಕೃತಕ ಕಾಲು ಜೋಡಣೆ ಮಾಡಲಾಗಿತ್ತು. ಕಾಲು ಕಳೆದುಕೊಂಡಾಗಿನಿಂದ ಕಾಂತರಾಜ್ ಮಾನಸಿಕ ಖಿನ್ನತೆಗೊಳಗಾಗಿದ್ದರು ಎಂದು ಹೇಳಲಾಗಿದೆ.

ಈ ನಡುವೆ ಕುಟುಂಬ ಸದಸ್ಯರು ಊರಿಗೆ ತೆರಳಿದ ವೇಳೆ ಕ್ವಾಟ್ರಸ್ ನಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕಾಂತರಾಜ್ ಈ ಹಿಂದೆ ಎ.ಎನ್.ಎಫ್. ಹಾಗೂ ಕಳಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು ಎನ್ನಲಾಗಿದೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments