Webdunia - Bharat's app for daily news and videos

Install App

ಆಟವಾಡುತ್ತಿದ್ದ ಮಗು ಕಾಲುವೆಗೆ ಬಿದ್ದು ಸಾವು!

Webdunia
ಗುರುವಾರ, 30 ಆಗಸ್ಟ್ 2018 (18:29 IST)
ಮಗುವೊಂದು ಆಟವಾಡುತ್ತಾ ಹೋಗಿ, ಕಾಲು ಜಾರಿ ಕಾಲುವೆಗೆ ಬಿದ್ದು ಬಾರದ ಲೋಕಕ್ಕೆ ಪಯಣ ಬೆಳೆಸಿದೆ.

ಮಗುವೊಂದು ಕಾಲು ಜಾರಿ ಕಾಲುವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕಾರಟಗಿ ಸಮೀಪದ ತೊಂಡಿಹಾಳ ಯರಮ್ಮನಕ್ಯಾಂಪ್ ನಲ್ಲಿ ನಡೆದಿದೆ.

ಸಣ್ಣ ಸಣ್ಣ ಗುಡಿಸಲುಗಳನ್ನು ಹಾಕಿಕೊಂಡು ದುಡಿದು ಜೀವನ ಸಾಗಿಸುತ್ತಿರುವ 10ಕ್ಕೂ ಅಧಿಕ ಕುಟುಂಬಗಳು ಹುಳ್ಕಿಹಾಳ ಗ್ರಾಮ ಪಂಚಾಯತಿಯ ವ್ಯಾಪ್ತಿಯ ತೊಂಡಿಹಾಳ ಮತ್ತು ಹುಳ್ಕಿಹಾಳ ಮಧ್ಯೆ ಹರಿಯುವ ಹಳ್ಳದ ದಡದಲ್ಲಿ ವಾಸವಾಗಿದ್ದಾರೆ. ದುಡಿಮೆಯೇ ಮೂಲವಾಗಿದ್ದರಿಂದ ಮಕ್ಕಳನ್ನು ಬಿಟ್ಟು ಕೆಲಸಕ್ಕೆ ಹೊಗುವುದು ಇಲ್ಲಿನ ಜನಕ್ಕೆ ಅನಿವಾರ್ಯವಾಗಿದೆ.

ಪ್ರತಿದಿನದಂತೆ ಕ್ಯಾಂಪಿನ ಎಲ್ಲ ಮಕ್ಕಳು ಆಟವಾಡುತ್ತಿರುವಾಗ 2ವರ್ಷದ ಹೆಣ್ಣು ಮಗುವೊಂದು ಆಟವಾಡುತ್ತಾ ಹೋಗಿ ಪಕ್ಕದಲ್ಲಿ ಇರುವ ಕಾಲುವೆಗೆ ಬಿದ್ದು ಸಾವನ್ನಪ್ಪಿದೆ.

ಈ ಕ್ಯಾಂಪಿನಲ್ಲಿ ಸರಿಯಾದ ಮೂಲ ಸೌಕರ್ಯಗಳಿಲ್ಲ, ಪಕ್ಕದಲ್ಲೆ ದೊಡ್ಡದಾದ ಹಳ್ಳ, ಕಾಲುವೆಗಳು ಹರಿದು ಹೋಗುತ್ತವೆ. ಅದರೂ ಈ ಕ್ಯಾಂಪಿನ ಜನರ ಮತ್ತು ಮಕ್ಕಳ ರಕ್ಷಣೆಗೆ ಯಾವುದೇ ತಡೆಗೊಡೆಯಾಗಲಿ, ಮುಳ್ಳು ತಂತಿಯಾಗಲಿ ಇಲ್ಲ. ಸೂಕ್ತ ರಕ್ಷಣೆ ನೀಡಬೇಕೆಂದು ಅಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments