Webdunia - Bharat's app for daily news and videos

Install App

ತಂದೆ- ತಾಯಿ ಬದುಕಿರುವಾಗ ಮಕ್ಕಳು ಆಸ್ತಿ ಲಾಭ ಪಡೆಯಲು ಸಾಧ್ಯವಿಲ್ಲ: ಹೈಕೋರ್ಟ್

Webdunia
ಭಾನುವಾರ, 20 ಮಾರ್ಚ್ 2022 (18:44 IST)
ಪೋಷಕರು ಬದುಕಿರುವಾಗಲೇ ಅವರ ಒಡೆತನದ ಆಸ್ತಿಯ ಮೇಲೆ ಮಗ ಹಕ್ಕು ಸಾಧಿಸಲು ಅಥವಾ ಲಾಭಾಂಶ ಪಡೆಯಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ.
 
ಸೋನಿಯಾ ಖಾನ್ ಎಂಬವರು ದೀರ್ಘ ಕಾಲದಿಂದ ಹಾಸಿಗೆ ಹಿಡಿದಿರುವ ತನ್ನ ಪತಿಯ ಒಡೆತನದ ಎಲ್ಲ ಆಸ್ತಿಗಳಿಗೆ ಅವರನ್ನು ಕಾನೂನುಬದ್ಧ ಹಕ್ಕುದಾರ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಈ ತೀರ್ಪು ನೀಡಲಾಗಿದೆ.ಪ್ರಕರಣದಲ್ಲಿ ಮಧ್ಯಪ್ರವೇಶ ಕೋರಿದ್ದ ಅವರ ಮಗ ಆಸಿಫ್ ಖಾನ್ ತಾನು ತನ್ನ ತಂದೆಯ ವಾಸ್ತವಿಕ ರಕ್ಷಕ ಎಂದು ಹೇಳಿಕೊಂಡಿದ್ದರು. ಪೋಷಕರು ಜೀವಂತವಾಗಿ ಇದ್ದರೂ ಅವರ ಆಸ್ತಿಯನ್ನು ಹಂಚಿಕೊಂಡು (ಎರಡು ಫ್ಲಾಟ್) ಹಂಚಿಕೊಂಡು ಕಾನೂನುಬದ್ಧ ಹಕ್ಕು ಇದೆ ಎಂದು ಅವರು ವಾದಿಸಿದ್ದರು. ಆದರೆ ಈ ವಾದ ಆಧಾರ ರಹಿತ ಮತ್ತು ಅತಾರ್ಕಿಕ ಎಂದು ನ್ಯಾಯಮೂರ್ತಿ ಗೌತಮ್ ಪಟೇಲ್ ಮತ್ತು ಮಾಧವ್ ಜಾಮದಾರ್ ಅವರಿದ್ದ ಪೀಠ ತಿಳಿಸಿತು.ಉತ್ತರಾಧಿಕಾರದ ಕಾನೂನಿನ ಅಡಿಯಲ್ಲಿ ಪೋಷಕರು ಜೀವಂತವಾಗಿರುವವರೆಗೆ ಪೋಷಕರ ಆಸ್ತಿಯಲ್ಲಿ ಹಕ್ಕು ಅಥವಾ ಒಡೆತನ ಪಡೆಯಲು ಯಾವುದೇ ಸಮುದಾಯಕ್ಕೆ ಸೇರಿದ ಮಗನಿಗೂ ಅವಕಾಶವಿಲ್ಲವೆಂದು ಅವರು ಸ್ಪಷ್ಟಪಡಿಸಿದರು.ಆಸಿಫ್‌ಗೆ ತನ್ನ ತಂದೆಯ ಫ್ಲಾಟ್‌ಗಳ ಮೇಲೆ ಯಾವುದೇ ಹಕ್ಕು ಇಲ್ಲ. ತನ್ನ ತಂದೆ ಬಗ್ಗೆ ಕಾಳಜಿ ವಹಿಸಿದ್ದಾನೆಂದು ಸಾಬೀತುಪಡಿಸುವ ಯಾವುದೇ ಅಂಶವೂ ಆತನ ಬಳಿ ಇಲ್ಲ. ಅಲ್ಲದೆ, ಆತ ತನ್ನ ತಾಯಿಗೆ ಪರ್ಯಾಯ ಪರಿಹಾರವಿದೆ ಎಂಬ ವಾದವನ್ನು ನಾವು ತಿಸ್ಕರಿಸುತ್ತೇವೆ. ಅವರ ವಾದವೇ ಸಂಪೂರ್ಣ ಹೃದಯಹೀನ ಮತ್ತು ದುರಾಸೆಯಿಂದ ಕೂಡಿದ ಆಸಿಫ್ ಅವರ ನಿಜವಾದ ಸ್ವಭಾವವನ್ನು ತೋರಿಸುತ್ತದೆ. ಅವರ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದೂ ಪೀಠ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments