Webdunia - Bharat's app for daily news and videos

Install App

ಶ್ರೀಲಂಕಾದಲ್ಲಿ‌ಆಹಾರವಿಲ್ಲದೆ ಮಕ್ಕಳ‌ ಪರದಾಟ

Webdunia
ಭಾನುವಾರ, 28 ಆಗಸ್ಟ್ 2022 (17:39 IST)
ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾದಲ್ಲಿ ಮಕ್ಕಳು ಬರಿಹೊಟ್ಟೆಯಲ್ಲಿ ರಾತ್ರಿ ಮಲಗುತ್ತಿದ್ದಾರೆ ಎಂದು ಹೇಳಿರುವ ವಿಶ್ವಸಂಸ್ಥೆಯು ಮುಂಬರುವ ದಿನಗಳಲ್ಲಿ ದಕ್ಷಿಣ ಏಷ್ಯಾದ ಬೇರೆ ರಾಷ್ಟ್ರಗಳಲ್ಲೂ ಸಹ ಇದೇ ಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದೆ. ರಫ್ತುಗಳನ್ನು ಖರೀದಿಸಲು ತೀವ್ರ ಸ್ವರೂಪದ ವಿದೇಶಿ ವಿನಿಮಯದ ಕೊರತೆಯನ್ನು ಶ್ರೀಲಂಕಾ ಸರ್ಕಾರ ಎದುರಿಸುತ್ತಿರುವುದರಿಂದ ಅಹಾರ ಸರಬರಾಜು, ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಅಭಾವ ಉಂಟಾಗಿದೆ. ದ್ವೀಪರಾಷ್ಟ್ರದಲ್ಲಿ ಆಹಾರ ಪದಾರ್ಥಗಳಾದ ಅಕ್ಕಿ, ಬೇಳೆ, ಖಾದ್ಯ ತೈಲ ಮತ್ತು ಇತರ ಸರಕುಗಳ ಬೆಲೆ ಗಗನಕ್ಕೆ ಮುಟ್ಟಿರುವ ಕಾರಣ ಬಡ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳು ಹಸಿದ ಹೊಟ್ಟೆಯಲ್ಲಿ ಮಲಗುತ್ತಿವೆ ಎಂದು ವಿಶ್ವಸಂಸ್ಥೆಯ ಮಕ್ಕಳ ಅಂಗವಾಗಿರುವ ಯುನಿಸೆಫ್ ದಕ್ಷಿಣ ಏಷ್ಯಾ ನಿರ್ದೇಶಕ ಲರಿಯಾ ಅಡ್ಜೀ ಹೇಳಿದ್ದಾರೆ. ‘ಮಕ್ಕಳು ಬರಿ ಹೊಟ್ಟೆಯಲ್ಲಿ ಮಲಗುತ್ತಿದ್ದಾರೆ. ಬೆಳಗ್ಗೆ ಊಟ ಸಿಕ್ಕೀತೋ ಅಥವಾ ತಮ್ಮಲ್ಲಿಗೆ ಅದು ಎಲ್ಲಿಂದ ಬಂದೀತು ಎಂಬ ಯೋಚನೆಯಲ್ಲೇ ಅವರು ಹಾಸಿಗೆಗೆ ಹೋಗುತ್ತಿದ್ದಾರೆ,’ ಎಂದು ಅವರು ಸುದ್ದಿಗಾರರಿಗೆ ಹೇಳಿದ್ದಾರೆ. ಕಳೆದ ಏಪ್ರಿಲ್​​​ನಲ್ಲಿ ₹51 ಬಿಲಿಯನ್ ವಿದೇಶಿ ಸಾಲ ತೀರಿಸಬೇಕಿದ್ದ ಶ್ರೀಲಂಕಾ ಕೈ ಚೆಲ್ಲಿಬಿಟ್ಟಿತ್ತು. ಸದ್ಯದ ಬಿಕ್ಕಟ್ಟಿನಿಂದ ಪಾರು ಮಾಡಲು ಅಲ್ಲಿನ ಸರ್ಕಾರ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಯೊಂದಿಗೆ ಮಾತುಕತೆ ನಡೆಸುತ್ತಿದೆ.
 
ಉಕ್ರೇನ್ ಮೇಲೆ ರಷ್ಯಾ ನಡೆಸಿದ ಆಕ್ರಮಣದಿಂದ ಇಂಧನದ ಬೆಲೆ ಅಂಕೆ ಮೀರಿದ್ದು, ಅದು ನೆರೆಹೊರೆಯ ರಾಷ್ಟ್ರಗಳ ಮೇಲೆ ಕೂಡ ಪರಿಣಾಮ ಬೀರುತ್ತಿದೆ ಎಂದು ಹೇಳಿರುವ ಲರಿಯಾ ಅಡ್ಜೀ ದಕ್ಷಿಣ ಏಷ್ಯಾ ಪ್ರಾಂತ್ಯದ ಇತರ ದೇಶಗಳಲ್ಲೂ ಅಹಾರ ಕೊರತೆಯ ಸಮಸ್ಯೆ ಎದುರಾಗಬಹುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments