Select Your Language

Notifications

webdunia
webdunia
webdunia
webdunia

ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ: ತನಿಖೆಗೆ ಸಿಎಂ ಆದೇಶ

ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ: ತನಿಖೆಗೆ ಸಿಎಂ ಆದೇಶ
ಬೆಂಗಳೂರು , ಶನಿವಾರ, 20 ಸೆಪ್ಟಂಬರ್ 2014 (15:12 IST)
ಬಿಸಿಯೂಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಲಿದ್ದಾರೆ. ಇಸ್ಕಾನ್‌ನವರು ಊಟ ತಯಾರಿಸಿದ್ದು, ಆಹಾರ ವಿಷಯುಕ್ತವಾಗಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುವುದಾಗಿ ಸಿಎಂ ತಿಳಿಸಿದರು.

 ಡಿಜೆ ಹಳ್ಳಿಯ ಉರ್ದು ಸರ್ಕಾರಿ ಶಾಲೆಯಲ್ಲಿ ನಿನ್ನೆ ಇಸ್ಕಾನ್ ಬಿಸಿಯೂಟ ಸೇವಿಸಿದ ನಂತರ 150ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.ನಿನ್ನೆ ಗುಣಮುಖರಾಗಿ ಮನೆಗೆ ಹಿಂತಿರುಗಿದ್ದ ಮಕ್ಕಳ ಪೈಕಿ  35 ಮಕ್ಕಳು ಮತ್ತೆ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರಿಂದ ಪೋಷಕರು ಆತಂಕಗೊಂಡಿದ್ದಾರೆ.

 ನಿನ್ನೆ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಶಾಲೆಗೆ ಭೇಟಿ ನೀಡಿ ಸೂಕ್ತ ಸೌಲಭ್ಯಗಳನ್ನು ಶಾಲೆಯಲ್ಲಿ ಕಲ್ಪಿಸುವುದಾಗಿ ಹೇಳಿದ್ದರು. 

Share this Story:

Follow Webdunia kannada