Webdunia - Bharat's app for daily news and videos

Install App

ಮಕ್ಕಳಿಗೆ ವಾಚ್ ಬೆಲೆ ಗೊತ್ತಿರುತ್ತೆ, ಸಿಎಂಗೆ ವಾಚ್ ಬೆಲೆ ಗೊತ್ತಿಲ್ಲವಾ?: ಶ್ರೀನಿವಾಸ್ ಪ್ರಸಾದ್

Webdunia
ಸೋಮವಾರ, 17 ಅಕ್ಟೋಬರ್ 2016 (14:30 IST)
ಜಾತ್ರೆಯಿಂದ ಮಕ್ಕಳಿಗೆ ವಾಚ್ ತಂದರೂ ಅದರ ಬೆಲೆ ಗೊತ್ತಿರುತ್ತೆ. ಆದರೆ, ಸಿಎಂ ಸಿದ್ದರಾಮಯ್ಯರಿಗೆ ತಮ್ಮ ಕೈಯಲ್ಲಿ ಕಟ್ಟಿದ್ದ ವಾಚ್ ಬೆಲೆ ಗೊತ್ತಿರಲಿಲ್ಲವೇ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಪ್ರಶ್ನಿಸಿದ್ದಾರೆ.
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಡವರಿಗೆ ಅನ್ನಭಾಗ್ಯ ನೀಡದ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಯಲ್ಲಿ 80 ಲಕ್ಷ ಬೆಲೆಯ ಹ್ಯೂಬ್ಲೆಟ್ ವಾಚ್. ತಮ್ಮ ಕೈಯಲ್ಲಿ ಕಟ್ಟಿದ್ದ ವಾಚ್ ಬೆಲೆ ಅವರಿಗೆ ಗೊತ್ತಿರಲಿಲ್ಲವೇ ಎಂದು ವಾಗ್ದಾಳಿ ನಡೆಸಿದರು.
 
ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ಕುಟುಂಬದವರಂತೆ ಇದ್ದೆವು. ಸಚಿವ ಸಂಪುಟದಿಂದ ನನ್ನನ್ನು ಕೈಬಿಟ್ಟಾಗ ಒಂದು ಮಾತು ಕೂಡ ಹೇಳಲಿಲ್ಲ. ನನ್ನ ಆರೋಗ್ಯದ ಬಗ್ಗೆಯು ವಿಚಾರಿಸಲಿಲ್ಲ ಸಿಎಂ ಹೀಗೆ ಮಾಡಬಾರದಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
 
ನನ್ನ ಅಧಿಕಾರಾವಧಿಯಲ್ಲಿ ಬರ ಪರಿಸ್ಥಿತಿ ನಿಭಾಯಿಸಿರುವ ಕುರಿತು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ, ಈ ಕುರಿತು ಸಿಎಂ ತೃಪ್ತಿ ವ್ಯಕ್ತಪಡಿಸಲಿಲ್ಲ. ನನ್ನ ಕೆಲಸದ ಕುರಿತು ಸಿಎಂ ಆತ್ಮಸಾಕ್ಷಿಯಿಂದ ಹೇಳಲಿ ಎಂದರು.
 
ಜಾತಿವಾರು ಸ್ಮಶಾನಗಳನ್ನು ಕೈಬಿಟ್ಟು ಸರಕಾರಿ ಸ್ಮಶಾನಗಳನ್ನು ಸ್ಥಾಪಿಸಿದ್ದೇವು. ಅಂತ್ಯ ಸಂಸ್ಕಾರಕ್ಕಾಗಿ ನೀಡುತ್ತಿದ್ದ ಹಣವನ್ನು ಹೆಚ್ಚು ಮಾಡಿದ್ದೇವು. ಈ ಕುರಿತು ಸರ್ವೆಯರ್‌ಗಳಿಗೆ ತರಬೇತಿ ನೀಡಿರುವುದು ನನ್ನ ಸಾಧನೆ ಅಲ್ಲವೇ ಎಂದು ಪ್ರಶ್ನಿಸಿದರು.
 
ಸಚಿವ ಎಚ್‌.ಸಿ.ಮಹಾದೇವಪ್ಪನವರ ಪುತ್ರನಿಗೆ ನನಗಿಂತ ಉತ್ತಮ ಹೆಸರಿದ್ಯಾ ಎಂದು ಪ್ರಶ್ನಿಸಿದ ಅವರು, ಈಗ ನನ್ನ ರಾಜಕೀಯ ಜೀವನದ ಕುರಿತು ಹೇಳಲ್ಲ. ಉಪಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಇನ್ನೂ ನಿರ್ಧರಿಸಿಲ್ಲ. ಬಿಜಿಪಿ ಹಾಗೂ ಜೆಡಿಎಸ್ ಪಕ್ಷದವರೂ ನನಗೆ ಆಹ್ವಾನ ನೀಡಿದ್ದಾರೆ. ಆದರೆ, ಯಾವ ಪಕ್ಷ ಸೇರಬೇಕು ಎಂದು ನಿರ್ಧರಿಸಿಲ್ಲ ಎಂದು ಸ್ಪಷ್ಟಪಡಿಸಿದರು. 
 
ಅರ್ಕಾವತಿ ಡಿನೋಫಿಕೇಶನ್ ಹಗರಣ ತನಿಖೆ ಹಂತದಲ್ಲಿದೆ. ಆದರೆ, ಇಲ್ಲಿಯವರೆಗೂ ತನಿಖೆ ಪೂರ್ಣವಾಗದಿರುವುದರಿಂದ ಸಹಜವಾಗಿಯೇ ಅನುಮಾನ ಹುಟ್ಟಿಸುವಂತಾಗಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಶಂಕೆ ವ್ಯಕ್ತಪಡಿಸಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚರಿಸುವವರ ಗಮನಕ್ಕೆ: ಶನಿವಾರದವರೆಗೂ ರಾತ್ರಿ ಬಂದ್

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ: ಸಿ.ಟಿ.ರವಿ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments