Select Your Language

Notifications

webdunia
webdunia
webdunia
webdunia

ಚಿಲುಮೆ ಕೇಸ್ : ಕಾಂಗ್ರೆಸ್ಗೂ ಮುನ್ನವೇ ಬಿಜೆಪಿ ದೂರು

ಚಿಲುಮೆ ಕೇಸ್ : ಕಾಂಗ್ರೆಸ್ಗೂ ಮುನ್ನವೇ ಬಿಜೆಪಿ ದೂರು
ಬೆಂಗಳೂರು , ಬುಧವಾರ, 23 ನವೆಂಬರ್ 2022 (10:46 IST)
ಬೆಂಗಳೂರು : ಚಿಲುಮೆ ಡೇಟಾ ಕಳವು ಪ್ರಕರಣ ಕೇಂದ್ರ ಚುನಾವಣಾ ಆಯೋಗದ ಮೆಟ್ಟಿಲೇರಿದೆ.

ಇಂದು ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡುತ್ತಿರುವ ಹಿನ್ನೆಲೆ ನಿನ್ನೆ ರಾತ್ರಿಯೇ ಬಿಜೆಪಿಯಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ಫ್ಯಾಕ್ಸ್ ಮೂಲಕ ದೂರು ಸಲ್ಲಿಕೆ ಆಗಿದೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಚಿಲುಮೆ ಸಂಸ್ಥೆಗೆ ಅನುಮತಿ ನೀಡಿರುವ ವಿಚಾರ ಉಲ್ಲೇಖಿಸಿ ಪರಿಷತ್ ಸದಸ್ಯ ಎನ್. ರವಿಕುಮಾರ್ 4 ಪುಟಗಳ ದೂರು ಸಲ್ಲಿಸಿದ್ದಾರೆ. ಮತಪಟ್ಟಿ ಡಿಲೀಟ್ಗೂ ರಾಜ್ಯ ಸರ್ಕಾರಕ್ಕೂ ಸಂಬಂಧ ಇಲ್ಲ.

ಚಿಲುಮೆ ಸಂಸ್ಥೆಯ ನೇಮಕ ಮಾಡಿದ್ದೇ ಕಾಂಗ್ರೆಸ್. ಈ ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ಮನವಿ ಮಾಡಲಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿದ ಸೌದಿ ಅರೇಬಿಯಾ