Webdunia - Bharat's app for daily news and videos

Install App

ಮಾರುಕಟ್ಟೆಗೆ ಬಂದಿದೆ ಚೀನಾ ಮಾರಕ ಬೆಳ್ಳುಳ್ಳಿ: ಇದನ್ನು ಗುರುತಿಸುವುದು ಹೇಗೆ

Krishnaveni K
ಸೋಮವಾರ, 30 ಸೆಪ್ಟಂಬರ್ 2024 (10:34 IST)
ಬೆಂಗಳೂರು: ಭಾರತದ ಮಾರುಕಟ್ಟೆಯಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿ ಬಂದಿದ್ದು ಕರ್ನಾಟಕದ ಕೆಲವು ಮಾರುಕಟ್ಟೆಗಳಿಗೂ ಬಂದಿದೆ ಎನ್ನುವ ಆತಂಕಕಾರೀ ವಿಚಾರ ಬೆಳಕಿಗೆ ಬಂದಿದೆ. ಈಗಾಗಲೇ ಶಿವಮೊಗ್ಗದ ಹಲವು ಕಡೆ ಅಧಿಕಾರಿಗಳು ದಾಳಿ ಮಾಡಿ ನಿಷೇಧಿತ ಬೆಳ್ಳುಳ್ಳಿ ವಶಪಡಿಸಿಕೊಂಡಿದ್ದಾರೆ.

ಆರೋಗ್ಯಕ್ಕೆ ಹಾನಿಕಾರಕವಾದ ಅಂಶವಿದೆ ಎಂಬ ಕಾರಣಕ್ಕೆ ಚೀನಾ ಬೆಳ್ಳುಳ್ಳಿಯಲ್ಲಿ ಭಾರತದಲ್ಲಿ ನಿಷೇಧಿಸಲಾಗಿದೆ. ಆದರೆ ಇತ್ತೀಚೆಗೆ ಬೆಳ್ಳುಳ್ಳಿಗೆ ಬೆಲೆ ಹೆಚ್ಚಳವಾಗಿರುವುದರಿಂದ ಕಳ್ಳ ಮಾರ್ಗದ ಮೂಲಕ ಚೀನಾ ಬೆಳ್ಳುಳ್ಳಿ ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಈ ವಿಚಾರ ಅಧಿಕಾರಿಗಳ ಗಮನಕ್ಕೆ ಬಂದಿದ್ದು ಕರ್ನಾಟಕಕ್ಕೂ ಕಾಲಿಟ್ಟಿದೆ ಎನ್ನುವುದು ಆತಂಕಕಾರೀ ವಿಚಾರವಾಗಿದೆ.

ಶಿವಮೊಗ್ಗದ 8 ಕಡೆ ದಾಳಿ ಮಾಡಿರುವ ಆಹಾರ ಸುರಕ್ಷತಾ ಅಧಿಕಾರಿಗಳು,  50 ಕ್ಕೂ ಹೆಚ್ಚು ಕೆ.ಜಿ. ಬೆಳ್ಳುಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾ ಮಾರ್ಕೆಟ್, ಎಪಿಎಂಸಿ ಮಾರುಕಟ್ಟೆ ಮುಂತಾದೆಡೆ ದಾಳಿ ಮಾಡಲಾಗಿದೆ.

ಈ ಬೆಳ್ಳುಳ್ಳಿ ಗುರುತಿಸುವುದು ಹೇಗೆ ಮತ್ತು ಅಡ್ಡಪರಿಣಾಮಗಳೇನು?
ಚೀನಾ ಮಾರುಕಟ್ಟೆ ಆರೋಗ್ಯಕ್ಕೆ ಮಾರಕವಾಗಿದೆ. ನಿಷೇಧಿತ ರಾಸಾಯನಿಕಗಳನ್ನು ಬಳಸಿ ಇದನ್ನು ಬೆಳೆಯಲಾಗುತ್ತದೆ. ಚೀನಾ ಬೆಳ್ಳುಳ್ಳಿ ನೋಡಲು ದಪ್ಪವಾಗಿರುತ್ತದೆ ಮತ್ತು ಕೊಂಚ ಪಿಂಕ್ ಬಣ್ಣದಲ್ಲಿರುತ್ತದೆ. ಅತಿಯಾಗಿ ರಾಸಾಯನಿ ಬಳಸುವುದರಿಂದ ಬೇಗನೇ ಕೆಡುವುದಿಲ್ಲ. ಆದರೆ ಇದನ್ನು ಸೇವನೆ ಮಾಡುವುದರಿಂದ ತೂಕ ಹೆಚ್ಚಳವಾಗಬಹುದು. ಎಲ್ಲಕ್ಕಿಂತ ಹೆಚ್ಚಾಗಿ ಈ ಬೆಳ್ಳುಳ್ಳಿ ಸೇವನೆಯಿಂದ ಮೂತ್ರಕೋಶ, ಲಿವರ್ ಗೆ ಹಾನಿಯಾಗಬಹುದು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments