Webdunia - Bharat's app for daily news and videos

Install App

ಚಿಂಚೋಳಿ ಕ್ಷೇತ್ರದ ಕೈ ಅಭ್ಯರ್ಥಿ ಹೆಸರು ನಾಲ್ಕು ಮತದಾರರ ಪಟ್ಟಿಯಲ್ಲಿ: ಬಿಜೆಪಿ ದೂರು

Webdunia
ಬುಧವಾರ, 1 ಮೇ 2019 (18:00 IST)
ಮೇ 19ರಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ವಿರುದ್ಧ ಮತದಾರರ ಪಟ್ಟಿಯಲ್ಲಿ ನಾಲ್ಕು ಕಡೆ ಹೆಸರಿರುವ ಆರೋಪ ಕೇಳಿಬಂದಿದೆ.

ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗದಿಂದ ದೂರು ಸಲ್ಲಿಕೆ ಮಾಡಲಾಗಿದೆ. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಂದು, ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎರಡು, ಚಿಂಚೋಳಿ ಕ್ಷೇತ್ರದ ಒಂದು ಕಡೆ ಮತದಾರರ ಪಟ್ಟಿಯಲ್ಲಿ ಸುಭಾಷ್ ರಾಠೋಡ್ ಹೆಸರಿದೆ ಎಂದು ಆರೋಪ ಮಾಡಲಾಗಿದೆ.

ಈ ಬಗ್ಗೆ ಈಗಾಗಲೇ ಬಿಜೆಪಿ ಪರವಾಗಿ ಆಕ್ಷೇಪ ಸಲ್ಲಿಸಿದ್ದಾರೆ ವಕೀಲ ಎನ್.ಎಸ್.ಪಾಟೀಲ್. ಪ್ರಜಾಪ್ರತಿನಿಧಿ ಕಾಯ್ದೆ 1950ರ ಕಲಂ 17 ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೇ ಸುಭಾಷ್ ರಾಠೋಡ್ ವಿರುದ್ಧ ಒಂದು ಎಫ್ಐಆರ್ ದಾಖಲಾಗಿದ್ದನ್ನು ಮರೆಮಾಚಿದ್ದಾರೆಂದು ಆರೋಪಿಸಲಾಗಿದೆ.

ಚಿಂಚೋಳಿ ತಾಲೂಕಿನ ಶೇರಿ ಬಡಾ ತಾಂಡಾದಲ್ಲಿ ಮತದಾರ ಪಟ್ಟಿಯಲ್ಲಿ ತಮ್ಮ ಹೆಸರಿದೆ ಎಂದಿದ್ದಾರೆ ರಾಠೋಡ್. ಈ ಹಿಂದೆಯೇ ಮತದಾರ ಪಟ್ಟಿಯಲ್ಲಿ ಹೆಸರು ಡಿಲೀಟ್ ಮಾಡಲು ಮನವಿ ಮಾಡಿದ್ದಾಗಿ ಸುಭಾಷ್ ರಾಠೋಡ್ ಸಮಜಾಯಿಷಿ ನೀಡಿದ್ದಾರೆ. ನಾಮಪತ್ರ ಪರಿಶೀಲನೆ ವೇಳೆ ಸಮಜಾಯಿಷಿ ನೀಡಿದ್ದಾರೆ ಸುಭಾಷ್ ರಾಠೋಡ್.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments