Webdunia - Bharat's app for daily news and videos

Install App

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Krishnaveni K
ಸೋಮವಾರ, 9 ಜೂನ್ 2025 (09:46 IST)
ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಭದ್ರತೆ ಕೊಡಲು ಕಷ್ಟ ಎಂದು ಹೇಳಿದರೆ ಕೊಡಲು ಕಷ್ಟ ಎಂದು ಡಿಸಿಪಿ ಸರ್ಕಾರಕ್ಕೆ ಬರೆದಿದ್ದ ಪತ್ರ ಈಗ ವೈರಲ್ ಆಗಿದ್ದು ಸರ್ಕಾರಕ್ಕೆ ಮುಜುಗರ ತಂದಿತ್ತಿದೆ.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್ ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲು ಭದ್ರತೆ ಸಮಸ್ಯೆಯಾಗುತ್ತದೆ ಎಂದು ಡಿಸಿಪಿ ಬರೆದಿದ್ದ ಪತ್ರ ಈಗ ವೈರಲ್ ಆಗಿದೆ. ಹೀಗಾಗಿ ಸರ್ಕಾರವೇ ಒತ್ತಡ ಹೇರಿ ಇಲ್ಲಿ ಕಾರ್ಯಕ್ರಮ ಆಯೋಜಿಸಿತ್ತು ಎನ್ನುವುದು ಸ್ಪಷ್ಟವಾಗಿದೆ. ಇದು ಸರ್ಕಾರಕ್ಕೆ ಮುಜುಗರ ತಂದಿಟ್ಟಿದೆ.

ನಿನ್ನೆಯೂ ಸಿಎಂ ಸಿದ್ದರಾಮಯ್ಯ ಭದ್ರತೆ ಒದಗಿಸುವುದು ಪೊಲೀಸರ ಕರ್ತವ್ಯ. ಇದರಲ್ಲಿ ನಮ್ಮ ತಪ್ಪೇನಿದೆ? ಸರ್ಕಾರಕ್ಕೆ ಮುಜುಗರವಾಗುವುದು ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಇದು ತೀವ್ರ ಟೀಕೆಗೂ ಒಳಗಾಗಿತ್ತು.

ಡಿಸಿಪಿ ಪತ್ರದಲ್ಲಿ ಏನಿದೆ?
ಆರ್ ಸಿಬಿಗೆ ದೇಶದಾದ್ಯಂತ ಸಾಕಷ್ಟು ಅಭಿಮಾನಿಗಳಿದ್ದಾರೆ. ವಿಧಾನಸೌಧದಲ್ಲಿ ಕಾರ್ಯಕ್ರಮ ಆಯೋಜಿಸಿದರೆ ಲಕ್ಷಾಂತರ ಅಭಿಮಾನಿಗಳು ಬರುತ್ತಾರೆ. ಆಗ ಭದ್ರತೆ ಒದಗಿಸುವುದು ಕಷ್ಟ. ವಿಧಾನಸೌಧ ಭದ್ರತಾ ವಿಭಾಗದಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಹೀಗಾಗಿ ಕಷ್ಟವಾಗಲಿದೆ. ಆಫ್ ಲೈನ್, ಆನ್ ಲೈನ್ ಪಾಸ್ ಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು. ವಿಧಾನಸೌಧ ಆವರಣ ಮತ್ತು ಮುಂಭಾಗದಲ್ಲಿ ಭದ್ರತೆ ದೃಷ್ಟಿಯಿಂದ ಸಿಸಿ ಕ್ಯಾಮರಾ ಹಾಗೂ ಡ್ರೋನ್ ನಿಗ್ರಹ ವ್ಯವಸ್ಥೆಯನ್ನು ಅಳವಡಿಸಬೇಕು. ವಿಧಾನಸೌಧ ಕಟ್ಟಡಕ್ಕೆ ಹಾನಿಯಾಗದಂತೆ ಭದ್ರತೆ ಅಳವಡಿಸಲು ಸಮಯಾವಕಾಶ ಬೇಕು ಎಂದು ಡಿಸಿಪಿ ಪತ್ರದಲ್ಲಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments