Webdunia - Bharat's app for daily news and videos

Install App

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Krishnaveni K
ಶನಿವಾರ, 7 ಜೂನ್ 2025 (12:02 IST)
ಬೆಂಗಳೂರು: ಚಿನ್ನಸ್ವಾಮಿ ಮೈದಾನದ ಬಳಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಒಂದೊಂದೇ ವಿಚಾರಗಳು ಹೊರಬೀಳುತ್ತಿವೆ.  ಸಿಎಂ ಕಚೇರಿಯಿಂದಲೇ ಕಾರ್ಯಕ್ರಮ ಆಯೋಜಿಸಲು ಒತ್ತಡ ಬಂದಿತ್ತು ಎಂದು ಪೊಲೀಸ್ ಮೂಲಗಳೇ ಹೇಳುತ್ತಿವೆ.

ಆಂಗ್ಲ ಮಾಧ್ಯಮವೊಂದರ ವರದಿ ಪ್ರಕಾರ, ಆರ್ ಸಿಬಿ ಫೈನಲ್ ಗೆದ್ದ ಮರುದಿನವೇ ಸಂಭ್ರಮಾಚರಣೆ ಮಾಡಲು ಪೊಲೀಸ್ ಇಲಾಖೆ ಮೊದಲು ಹಿಂಜರಿದಿತ್ತು. ಭದ್ರತೆ ಸಮಸ್ಯೆಯಾಗಬಹುದು ಎಂಬ ಕಾರಣಕ್ಕೆ ಎರಡು ದಿನ ಮುಂದೂಡಲು ಸಲಹೆ ನೀಡಿತ್ತು. ಆದರೆ ಸಿಎಂ ಕಚೇರಿಯಿಂದಲೇ ಒತ್ತಡ ಬಂದಿತ್ತು ಎಂಬ ಕಾರಣಕ್ಕೆ ಉನ್ನತ ಅಧಿಕಾರಿಗಳು ಭದ್ರತೆ ನೀಡಲು ಒಪ್ಪಿದ್ದರು ಎಂಬ ಮಾಹಿತಿ ಹೊರಬೀಳುತ್ತಿದೆ.

ಸ್ವತಃ ಸಿಎಂ ಕಚೇರಿಯಿಂದಲೇ ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಎಲ್ಲಾ ಸಿದ್ಧತೆ ಮಾಡಲು ಸೂಚನೆ ಬಂದಿತ್ತು. ಅಪಾಯವಿದ್ದರೂ ಸಿದ್ಧತೆ ನಡೆಸಿ ಎಂದು ಸೂಚನೆ ಬಂದಿತ್ತು ಎನ್ನಲಾಗಿದೆ. ಪೊಲೀಸ್ ಕಮಿಷನರ್ ಗೆ ಕಾರ್ಯಕ್ರಮ ಆಯೋಜಿಸುವುದೇ ಇಷ್ಟವಿರಲಿಲ್ಲ ಎನ್ನುತ್ತಿದೆ ಪೊಲೀಸ್ ಇಲಾಖೆ ಮೂಲಗಳು.

ಹಾಗಿದ್ದ ಮೇಲೆ ಈಗ ಬಿ ದಯಾನಂದ ಅವರನ್ನು ಹೊಣೆಗಾರರನ್ನಾಗಿ ಮಾಡಿ ಅಮಾನತು ಮಾಡಿರುವುದು ಯಾಕೆ ಎಂದು ಪೊಲೀಸ್ ಇಲಾಖೆಯೊಳಗೇ ಅಸಮಾಧಾನ ಮೂಡಿದೆ ಎನ್ನಲಾಗಿದೆ. ಆರ್ ಸಿಬಿ ಟೀಂ ಬಂದಾಗ ಮೊದಲು ಹೋಗಿ ಸ್ವಾಗತಿಸಿದ್ದೇ ಡಿಕೆ ಶಿವಕುಮಾರ್. ಈಗ ಕ್ರಮ ಮಾತ್ರ ಪೊಲೀಸರ ಮೇಲೆ ಯಾಕೆ ಎಂಬುದು ಅಧಿಕಾರಿಗಳ ಅಸಮಾಧಾನವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments